ಮುಂಬೈ ಇಡಿ ಕಚೇರಿಯಲ್ಲಿ ಬೆಂಕಿ 
ದೇಶ

Mumbai: ಇಡಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; 12 ಗಂಟೆ ಕಾರ್ಯಾಚರಣೆ; ಕಡತ, ಪೀಠೋಪಕರಣಗಳಿಗೆ ಹಾನಿ!

ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಇದಕ್ಕಿದ್ದಂತೆ ಭಾರೀ ಬೆಂಕಿ ಉಂಟಾಗಿದೆ.

ಮುಂಬೈ: ದಕ್ಷಿಣ ಮುಂಬೈನಲ್ಲಿರುವ ಇಡಿ ಕಚೇರಿ ಕಟ್ಟಡದಲ್ಲಿ ಭಾನುವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಲ್ಲಾರ್ಡ್ ಎಸ್ಟೇಟ್ ಪ್ರದೇಶದಲ್ಲಿರುವ ಕೈಸರ್-ಐ-ಹಿಂದ್ ಕಟ್ಟಡದಲ್ಲಿರುವ ಇಡಿ ಕಚೇರಿಯಲ್ಲಿ ಇದಕ್ಕಿದ್ದಂತೆ ಭಾರೀ ಬೆಂಕಿ ಉಂಟಾಗಿದ್ದು, ಎಂಟು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ, ಸುಮಾರು 12 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ನಂದಿಸಲಾಯಿತು ಎಂದು ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಡಿ ಕಚೇರಿಯ ಐದು ಅಂತಸ್ತಿನ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಮಾತ್ರ ಬೆಂಕಿ ಉಂಟಾಗಿದೆ. ಆದರೆ, ಕಡತಗಳು, ಪೀಠೋಪಕರಣಗಳು ಸುಟ್ಟುಹೋಗಿರುವುದಾಗಿ ಮುಂಬೈ ಅಗ್ನಿಶಾಮಕ ದಳದ ಮುಖ್ಯ ಅಗ್ನಿಶಾಮಕ ಅಧಿಕಾರಿ ರವೀಂದ್ರ ಅಂಬಲ್ಗೇಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಬಾಗಿಲು, ಕಿಟಕಿಗಳನ್ನು ಒಡೆದು ಕಟ್ಟಡದೊಳಗೆ ಪ್ರವೇಶಿಸಿದ್ದು, ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಅವಘಡಕ್ಕೆ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣವಾಗಿದ್ದು, ಪೀಠೋಪಕರಣಗಳು, ಬೀರುಗಳು ಮತ್ತು ವಿದ್ಯುತ್ ಅಳವಡಿಕೆಗಳಿಗೆ ಹಾನಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ತಂಡಗಳು ಸ್ಥಳದಲ್ಲಿದ್ದು ಪಂಚನಾಮೆ ನಡೆಸುತ್ತಿವೆ. ಇಡಿ ಸಿಬ್ಬಂದಿ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡವನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಪೊಲೀಸರು ವಿವರವಾದ ಪಂಚನಾಮೆ ನಡೆಸಿ ದಾಖಲೆಗಳನ್ನು ತೆಗೆದುಕೊಂಡಿದ್ದರೂ ಇಡಿ ಯಾವುದೇ ದೂರು ದಾಖಲಿಸಿಲ್ಲ ಎಂದು ಅವರು ಹೇಳಿದರು. ಬೆಂಕಿಯಲ್ಲಿ ಹಲವಾರು ದಾಖಲೆಗಳು ಮತ್ತು ಉಪಕರಣಗಳು ಸುಟ್ಟು ಹೋಗಿರಬಹುದು ಅಥವಾ ಹಾನಿಗೊಳಗಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT