ವಿ ಸೆಂಥಿಲ್ ಬಾಲಾಜಿ ಮತ್ತು ಕೆ. ಪೊನ್ಮುಡಿ 
ದೇಶ

Tamil Nadu: DMK ಸರ್ಕಾರಕ್ಕೆ ಡಬಲ್ ಆಘಾತ; ಸಚಿವ ಸ್ಥಾನಕ್ಕೆ Senthil Balaji, K Ponmudy ರಾಜಿನಾಮೆ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ತಮಿಳುನಾಡು ಸಚಿವರಾದ ವಿ ಸೆಂಥಿಲ್ ಬಾಲಾಜಿ (V Senthil Balaji) ಮತ್ತು ಕೆ. ಪೊನ್ಮುಡಿ (K Ponmudy) ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಚೆನ್ನೈ: ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದ್ದು ಡಿಎಂಕೆ ಸರ್ಕಾರದ ಇಬ್ಬರು ಪ್ರಮುಖ ಸಚಿವರು ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಹೌದು.. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ತಮಿಳುನಾಡು ಸಚಿವರಾದ ವಿ ಸೆಂಥಿಲ್ ಬಾಲಾಜಿ (V Senthil Balaji) ಮತ್ತು ಕೆ. ಪೊನ್ಮುಡಿ (K Ponmudy) ತಮ್ಮ ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲ ಆರ್.ಎನ್. ರವಿ ಭಾನುವಾರ ಸಚಿವರಾದ ವಿ. ಸೆಂಥಿಲ್‌ಬಾಲಾಜಿ ಮತ್ತು ಕೆ. ಪೊನ್ಮುಡಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಸೆಂಥಿಲ್ ಬಾಲಾಜಿ ವಿರುದ್ಧ ಅಕ್ರಮ ಹಣವರ್ಗಾವಣೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈ ಹಿಂದೆ ಇಡಿ ಅವರನ್ನು ಬಂಧಿಸಿತ್ತು. ಅಂತೆಯೇ ಇಂದು ರಾಜಿನಾಮೆ ನೀಡಿರುವ ಕೆ ಪೊನ್ಮುಡಿ ಕೂಡ ಹಿಂದೂ ಧರ್ಮದ ಕುರಿತು ಮತ್ತು ಮಹಿಳೆಯರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿಪಕ್ಷಗಳು ಮಾತ್ರವಲ್ಲದೇ ಸ್ವಪಕ್ಷೀಯರಿಂದಲೂ ಟೀಕೆ ಎದುರಿಸಿದ್ದರು.

ಖಾತೆ ಪುನರ್ ಹಂಚಿಕೆ

ರಾಜಭವನದ ಅಧಿಕೃತ ಪ್ರಕಟಣೆಯ ಪ್ರಕಾರ, ಸಾರಿಗೆ ಸಚಿವ ಎಸ್.ಎಸ್. ಶಿವಶಂಕರ್ ಅವರಿಗೆ ವಿದ್ಯುತ್ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದ್ದು, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಎಸ್. ಮುತ್ತುಸಾಮಿ ಅವರಿಗೆ ನಿಷೇಧ ಮತ್ತು ಅಬಕಾರಿ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ.

ಅಂತೆಯೇ ಗಮನಾರ್ಹ ಪುನರ್ರಚನೆಯಲ್ಲಿ, ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಆರ್.ಎಸ್. ರಾಜಕಣ್ಣಪ್ಪನ್ ಅವರನ್ನು ಅರಣ್ಯ ಮತ್ತು ಖಾದಿ ಸಚಿವರನ್ನಾಗಿ ಮರುನಾಮಕರಣ ಮಾಡಲಾಗಿದೆ. ಏತನ್ಮಧ್ಯೆ, ಮಾಜಿ ಸಚಿವ ಟಿ. ಮನೋ ತಂಗರಾಜ್ ಅವರು ಮತ್ತೆ ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಮತ್ತು ಹಾಲು ಮತ್ತು ಡೈರಿ ಅಭಿವೃದ್ಧಿ ಖಾತೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ. ಮನೋ ತಂಗರಾಜ್ ಅವರ ಪ್ರಮಾಣವಚನ ಸಮಾರಂಭವು ಏಪ್ರಿಲ್ 28 ರ ಸೋಮವಾರ ರಾಜಭವನದಲ್ಲಿ ನಡೆಯಲಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT