ಸಿಎಂ ಪಿಣರಾಯಿ ವಿಜಯನ್ 
ದೇಶ

ಕೇರಳ ಸಿಎಂ ಕಚೇರಿ, ರಾಜಭವನ, ಕೊಚ್ಚಿ ವಿಮಾನ ನಿಲ್ದಾಣ ಟಾರ್ಗೆಟ್: ಮತ್ತೆ ಬಾಂಬ್ ಬೆದರಿಕೆ

ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ತಂಡಗಳು ಎಲ್ಲಾ ಸ್ಥಳಗಳಲ್ಲಿ ತಪಾಸಣೆ ಆರಂಭಿಸಿವೆ.

ತಿರುವನಂತಪುರಂ: ಕೇರಳದ ಮುಖ್ಯಮಂತ್ರಿಗಳ ಕಚೇರಿ, ಕ್ಲಿಫ್ ಹೌಸ್, ರಾಜಭವನ, ತಿರುವನಂತಪುರಂನಲ್ಲಿರುವ ಸಾರಿಗೆ ಆಯುಕ್ತರ ಕಚೇರಿ ಮತ್ತು ಕೊಚ್ಚಿಯ ನೆಡುಂಬಸ್ಸೆರಿ ವಿಮಾನ ನಿಲ್ದಾಣ ಸೇರಿದಂತೆ ಕೇರಳದ ಐದು ಪ್ರಮುಖ ಸ್ಥಳಗಳಿಗೆ ಸೋಮವಾರ ಹೊಸದಾಗಿ ಬಾಂಬ್ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ.

ಇಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ತಂಡಗಳು ಎಲ್ಲಾ ಸ್ಥಳಗಳಲ್ಲಿ ತಪಾಸಣೆ ಆರಂಭಿಸಿವೆ.

ತಿರುವನಂತಪುರಂನಲ್ಲಿ ಮಧ್ಯಾಹ್ನ 2 ಗಂಟೆಯ ವೇಳೆಗೆ ನಾಲ್ಕು ಕೇಂದ್ರಗಳಲ್ಲಿ ಮತ್ತು ನೆಡುಂಬಸ್ಸೆರಿ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 2.30 ರ ಸುಮಾರಿಗೆ ಸ್ಫೋಟ ಸಂಭವಿಸಲಿದೆ ಎಂಬ ಎಚ್ಚರಿಕೆಯ ಸಂದೇಶ ಕಳುಹಿಸಲಾಗಿದೆ. ಇಮೇಲ್‌ಗಳ ಸ್ವರೂಪ ಒಂದೇ ರೀತಿಯದ್ದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಿರುವನಂತಪುರಂ ವಿಮಾನ ನಿಲ್ದಾಣ ಸ್ಟೋಟಿಸುವುದಾಗಿ ನನ್ನೆ ಇದೇ ರೀತಿಯ ಸಂದೇಶ ಬಂದಿತ್ತು. ಕಳೆದ ಮೂರು ವಾರಗಳಿಂದ ರಾಜ್ಯವನ್ನು ಪೀಡಿಸುತ್ತಿರುವ ಹುಸಿ ಬಾಂಬ್ ಬೆದರಿಕೆ ಕರೆಗಳು ಕಡಿಮೆಯಾಗಿವೆ ಎಂದು ಅಧಿಕಾರಿಗಳು ನಂಬಿದ್ದರು, ಆದರೆ ಸೋಮವಾರ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮತ್ತೆ ಹೊಸದಾಗಿ ಬಾಂಬ್ ಬೆದರಿಕೆ ಬರಲು ಶುರು ಆಗಿದೆ.

ಆರಂಭಿಕ ಪರಿಶೀಲನೆ ವೇಳೆ ಹುಸಿ ಬೆದರಿಕೆ ಎಂದು ಸೂಚಿಸಿದರೂ, ಭದ್ರತಾ ಏಜೆನ್ಸಿಗಳು ತೀವ್ರ ತಪಾಸಣೆ ನಡೆಸುತ್ತಿವೆ. ಸಿಐಎಸ್ಎಫ್ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಮತ್ತು ರಾಜ್ಯ ಪೊಲೀಸರು ಜಂಟಿಯಾಗಿ ಸಂಪೂರ್ಣ ತಪಾಸಣೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳಲ್ಲಿ ಇಂತಹ ಎಂಟು ಹುಸಿ ಬಾಂಬ್ ಬೆದರಿಕೆ ಕರೆ ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT