ರಾಷ್ಟ್ರೀಯ ತನಿಖಾ ಸಂಸ್ಥೆ 
ದೇಶ

Pahalgam attack: ಕಣಿವೆಯಲ್ಲಿನ ಡಜನ್‌ಗೂ ಹೆಚ್ಚು ಸಕ್ರಿಯ ಉಗ್ರರ ಕೈವಾಡ ಪತ್ತೆ; ಮೂವರ ತಲೆಗೆ 20 ಲಕ್ಷ ರೂ ಬಹುಮಾನ ಘೋಷಣೆ

ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ತಲಾ ಮೂವರು ಜೈಶ್-ಎ-ಮೊಹಮ್ಮದ್ (JEM) ಮತ್ತು ಹಿಜ್ಬುಲ್ ಮುಜಾಹಿದೀನ್ (HM)ಸಂಘಟನೆಗೆ ಸೇರಿದವರಾಗಿದ್ದಾರೆ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ತನಿಖೆಯನ್ನು ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕಣಿವೆಯಲ್ಲಿನ ಡಜನ್‌ಗೂ ಹೆಚ್ಚು ಉಗ್ರರನ್ನು ಗುರುತಿಸಿದೆ. ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೋಯ್ಬಾ( LET) ಮತ್ತು ತಲಾ ಮೂವರು ಜೈಶ್-ಎ-ಮೊಹಮ್ಮದ್ (JEM) ಮತ್ತು ಹಿಜ್ಬುಲ್ ಮುಜಾಹಿದೀನ್ (HM)ಸಂಘಟನೆಗೆ ಸೇರಿದವರಾಗಿದ್ದಾರೆ. ಅವರು ದಾಳಿ ನಡೆಸಲು ಭಯೋತ್ಪಾದಕರಿಗೆ ನೆರವಾಗಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಉಗ್ರರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಅವರಲ್ಲಿ ಹನ್ನೆರಡು ಮಂದಿಯನ್ನು NIA ಗುರುತಿಸಿದ್ದು, ಪಹಲ್ಗಾಮ್ ಉಗ್ರರ ದಾಳಿ ಪ್ರಕರಣದ ತನಿಖೆ ಪ್ರಗತಿಯಲ್ಲಿರುವಂತೆ ಏಜೆನ್ಸಿ ಇದೀಗ ಅವರ ಮೇಲೆ ಕಣ್ಣಿಟ್ಟಿದೆ. ಪಹಲ್ಗಾಮ್ ದಾಳಿಯಲ್ಲಿನ ಸಂತ್ರಸ್ತರ ಹೇಳಿಕೆಗಳನ್ನು ದಾಖಲಿಸಿದ ನಂತರ ಗುಪ್ತಚರ ಬ್ಯೂರೋ ಹಂಚಿಕೊಂಡ ಪಟ್ಟಿಯಿಂದ NIA ಅವರನ್ನು ಗುರುತಿಸಿದೆ.

NIA ಶಂಕಿತ ಉಗ್ರರ ಪಟ್ಟಿಯಲ್ಲಿರುವ 14 ಸಕ್ರಿಯ ಭಯೋತ್ಪಾದಕರಲ್ಲಿ ಹೆಚ್ಚಿನವರು 20ರ ವಯಸ್ಸಿನವರಾಗಿದ್ದು, 2022ರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ್ದಾರೆ. ಶೋಪಿಯಾನ್‌ನಲ್ಲಿ ಐವರು, ಪುಲ್ವಾಮಾದಲ್ಲಿ ನಾಲ್ವರು, ಅನಂತನಾಗ್‌ನಲ್ಲಿ ಇಬ್ಬರು ಮತ್ತು ಸೋಪೋರ್, ಅವಂತಿಪೋರಾ ಮತ್ತು ಕುಲ್ಗಾಮ್‌ನಲ್ಲಿ ತಲಾ ಒಬ್ಬರು ಸಕ್ರಿಯರಾಗಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, LET ಉಗ್ರ ಸಂಘಟನೆಯ ಅಹ್ಸಾನ್ ಶೇಖ್ ಇತರ ನಾಲ್ವರೊಂದಿಗೆ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆತನ ಮನೆಯನ್ನು ಈಗಾಗಲೇ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ. ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿರುವ ಮತ್ತೊಬ್ಬ ಶಂಕಿತ ಶಾಹಿದ್ ಕುಟೇ ಅವರ ಮನೆಯನ್ನೂ ಧ್ವಂಸಗೊಳಿಸಲಾಗಿದೆ.

ಪಹಲ್ಗಾಮ್ ದಾಳಿಯಲ್ಲಿ ಇನ್ನೊಬ್ಬ ಭಯೋತ್ಪಾದಕ JEM ಸಂಘಟನೆಯ ಆಸಿಫ್ ಶೇಖ್ ಹೆಸರು ಕೂಡ ಕಾಣಿಸಿಕೊಂಡಿದೆ. ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ISI ನಿರ್ದೇಶನದ ಮೇರೆಗೆ ಪಹಲ್ಗಾಮ್ ಹತ್ಯೆಯಲ್ಲಿ LET ಗೆ ಜೆಇಎಂ ನೆರವಾಗಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಟ್ರಾಲ್‌ನಲ್ಲಿರುವ ಶೇಖ್ ಅವರ ನಿವಾಸವನ್ನು ಭದ್ರತಾ ಪಡೆಗಳು ನೆಲಸಮಗೊಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ ಇಬ್ಬರು ಪಾಕಿಸ್ತಾನಿಗಳಾದ ಅಲಿ ಭಾಯಿ ಅಲಿಯಾಸ್ ತಲ್ಹಾ ಭಾಯಿ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಸ್ಥಳೀಯ ಉಗ್ರ ಆದಿಲ್ ಹುಸೇನ್ ಥೋಕರ್ ಸೇರಿದಂತೆ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅವರ ತಲೆಗೆ ತಲಾ 20 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT