ಕಳೆದ ಬಾರಿ ಬಿಹಾರದಲ್ಲಿ ಪ್ರಧಾನಿ ಮೋದಿ ಮಾತು  
ದೇಶ

ಮೇ 4 ರಂದು ಬಿಹಾರಕ್ಕೆ ಪ್ರಧಾನಿ ಮೋದಿ ಮತ್ತೆ ಭೇಟಿ; 'ಖೇಲೋ ಇಂಡಿಯಾ ಯೂತ್ ಗೇಮ್ಸ್' 2025 ಉದ್ಘಾಟನೆ

ಈ ಬಾರಿ, ಅವರು ರಾಜ್ಯ ರಾಜಧಾನಿಯ ಪಾಟಲಿಪುತ್ರ ಸಂಕೀರ್ಣದಲ್ಲಿ 'ಖೇಲೋ ಇಂಡಿಯಾ ಯೂತ್ ಗೇಮ್ಸ್ 2025' ಅನ್ನು ಉದ್ಘಾಟಿಸಲಿದ್ದಾರೆ.

ಪಾಟ್ನಾ: ಈ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸಲಿರುವ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೇ 4 ರಂದು ಮತ್ತೆ ಭೇಟಿ ನೀಡುತ್ತಿದ್ದು, 10 ದಿನಗಳಲ್ಲಿ ಇದು ಎರಡನೇ ಭೇಟಿಯಾಗಿದೆ.

ಈ ಬಾರಿ, ಅವರು ರಾಜ್ಯ ರಾಜಧಾನಿಯ ಪಾಟಲಿಪುತ್ರ ಸಂಕೀರ್ಣದಲ್ಲಿ 'ಖೇಲೋ ಇಂಡಿಯಾ ಯೂತ್ ಗೇಮ್ಸ್ 2025' ಅನ್ನು ಉದ್ಘಾಟಿಸಲಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾನುವಾರ ರಾಜ್ಯವು ಮೊದಲ ಬಾರಿಗೆ ಆಯೋಜಿಸುತ್ತಿರುವ ಮೆಗಾ ಕ್ರೀಡಾಕೂಟದ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ, ಬಿಹಾರ ರಾಜ್ಯ ಕ್ರೀಡಾ ಪ್ರಾಧಿಕಾರದ ಮಹಾನಿರ್ದೇಶಕ ಎಸ್. ರವೀಂದ್ರನ್ ಅವರು ಬಿಹಾರದಲ್ಲಿ ನಡೆದ ಎರಡು ಕಾರ್ಯಕ್ರಮಗಳಿಗಾಗಿ ಜೆನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಿಂದ ನಿತೀಶ್ ಅವರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು.

ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಏಪ್ರಿಲ್ 24 ರಂದು ಮಧುಬನಿಗೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು. ಅಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆ ಮಾಡಿದ ಭಯೋತ್ಪಾದಕರಿಗೆ ಕಠಿಣ ಎಚ್ಚರಿಕೆ ನೀಡಿದರು.

ಇದೀಗ ಆಡಳಿತಾರೂಢ ಎನ್‌ಡಿಎನ ಪ್ರಮುಖ ಮಿತ್ರ ಪಕ್ಷವಾದ ಬಿಜೆಪಿ, ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮೇ 4 ರಂದು ನಡೆಯಲಿರುವ ಕಾರ್ಯಕ್ರಮವನ್ನು ಮೋದಿ ಮೆಗಾ ಶೋ ಆಗಿ ಪರಿವರ್ತಿಸಲು ಪ್ರಯತ್ನಿಸುತ್ತಿದೆ. ಕ್ರೀಡಾ ಕಾರ್ಯಕ್ರಮದ ಹೊರತಾಗಿ, ಪ್ರಧಾನಿ ತಮ್ಮ ಒಂದು ದಿನದ ಭೇಟಿಯ ಸಮಯದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಎಂದು ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಹೇಳಿದ್ದಾರೆ.

ಮುಂಬರುವ ಚುನಾವಣೆಗಳಿಗೆ ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಬಿಜೆಪಿ ಹೆಚ್ಚು ಅವಲಂಬಿಸಿದೆ, ವಿಶೇಷವಾಗಿ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರ ನಿಧನದ ನಂತರ, ಪಕ್ಷಕ್ಕೆ ಸ್ಪಷ್ಟ ಮುಖ್ಯಮಂತ್ರಿ ಅಭ್ಯರ್ಥಿಯ ಕೊರತೆ ಉಂಟಾಗಿದೆ. "ಇದರಿಂದಾಗಿ, ನಿತೀಶ್ ನಾಯಕತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ನಿರ್ಧರಿಸಿದೆ" ಎಂದು ರಾಜಕೀಯ ವಿಶ್ಲೇಷಕ ಪ್ರಮೋದ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT