ನೇಹಾ 
ದೇಶ

ಪಹಲ್ಗಾಮ್ ದಾಳಿ ಕುರಿತು ವಿವಾದಾತ್ಮಕ ಪೋಸ್ಟ್‌: ಜಾನಪದ ಗಾಯಕಿ ನೇಹಾ ವಿರುದ್ಧ ದೇಶದ್ರೋಹದ ಕೇಸ್ ದಾಖಲು

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು.

ಲಖನೌ: ಪಹಲ್ಗಾಮ್ ಉಗ್ರ ದಾಳಿಯ ನಂತರ ನಿರ್ದಿಷ್ಟ ಧಾರ್ಮಿಕ ಸಮುದಾಯವನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಪ್ರಚೋದನಕಾರಿ ಪೋಸ್ಟ್‌ಗಳು ದೇಶದ ಏಕತೆಗೆ ಹಾನಿ ಉಂಟುಮಾಡಬಹುದು ಎಂಬ ದೂರಿನ ಆಧಾರದ ಮೇರೆಗೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ.

ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು. ಪ್ರವಾಸಿಗರ ಧರ್ಮವನ್ನು ಕೇಳಿ ಹತ್ಯೆ ಮಾಡಲಾಗಿದ್ದು, ಇದು ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

"ಇಂತಹ ಪರಿಸ್ಥಿತಿಯಲ್ಲಿ, ಗಾಯಕಿ ಮತ್ತು ಕವಯಿತ್ರಿ ನೇಹಾ ಸಿಂಗ್ ರಾಥೋಡ್ ಅವರು ತಮ್ಮ ಟ್ವಿಟರ್(ಈಗ X) ಹ್ಯಾಂಡಲ್ @nehafolksinger ಬಳಸಿಕೊಂಡು ರಾಷ್ಟ್ರೀಯ ಸಮಗ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕೆಲವು ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದಾರೆ ಮತ್ತು ಧರ್ಮದ ಆಧಾರದ ಮೇಲೆ ಒಂದು ಸಮುದಾಯವನ್ನು ಮತ್ತೊಂದು ಸಮುದಾಯವನ್ನು ಪ್ರಚೋದಿಸಲು ಪದೇ ಪದೇ ಯತ್ನಿಸಿದ್ದಾರೆ" ಎಂದು ದೂರುದಾರ ಅಭಯ್ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಲಖನೌದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಜಾನಪದ ಗಾಯಕಿಯ ವಿರುದ್ಧ ಹಲವಾರು ಆರೋಪಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದರಲ್ಲಿ ಮಥೀಯ ದ್ವೇಷವನ್ನು ಉತ್ತೇಜಿಸಲು ಪ್ರಯತ್ನಿಸುವುದು, ಸಾರ್ವಜನಿಕ ಶಾಂತಿಗೆ ಭಂಗ ತರುವುದು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ನೇಹಾ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!