ಸಾಂದರ್ಭಿಕ ಚಿತ್ರ  
ದೇಶ

ಪಹಲ್ಗಾಮ್ ದಾಳಿಯ ಶಂಕಿತರು: ಕಾಶ್ಮೀರ ಕಣಿವೆಯಲ್ಲಿ ಡಜನ್‌ಗೂ ಹೆಚ್ಚು ಸಕ್ರಿಯ ಭಯೋತ್ಪಾದಕರ ಗುರುತು

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಯನ್ನು ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಉಗ್ರಗಾಮಿಗಳು, ಭಯೋತ್ಪಾದಕರಿಗೆ ಸಹಾಯ ಮಾಡಿದ ಶಂಕೆಯ ಮೇಲೆ ಒಂದು ಡಜನ್‌ಗೂ ಹೆಚ್ಚು ಮಂದಿಗಳನ್ನು ಬಂಧಿಸಿದೆ.

ಅವರಲ್ಲಿ ಎಂಟು ಮಂದಿ ಲಷ್ಕರ್-ಎ-ತೈಬಾ (LeT) ದವರು ಮತ್ತು ಮೂವರು ತಲಾ ಜೈಶ್-ಎ-ಮೊಹಮ್ಮದ್ (JeM) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (HM) ಗೆ ಸೇರಿದವರು. ಇವರು ದಾಳಿಯನ್ನು ನಡೆಸಲು ಭಯೋತ್ಪಾದಕರಿಗೆ ಸಹಾಯ ಮಾಡಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಾಶ್ಮೀರ ಕಣಿವೆಯಲ್ಲಿ ಸುಮಾರು 60 ಭಯೋತ್ಪಾದಕರು ಸಕ್ರಿಯರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಎನ್‌ಐಎ ಅವರಲ್ಲಿ ಒಂದು ಡಜನ್‌ಗೂ ಹೆಚ್ಚು ಜನರನ್ನು ಪತ್ತೆಹಚ್ಚಿದೆ. ಪಹಲ್ಗಾಮ್ ಭಯೋತ್ಪಾದನಾ ಪ್ರಕರಣದ ತನಿಖೆ ಮುಂದುವರೆದಂತೆ ಅವರು ಈಗ ಏಜೆನ್ಸಿಯ ಕಣ್ಗಾವಲಿನಲ್ಲಿದ್ದಾರೆ.

26 ಜನರನ್ನು ಬಲಿತೆಗೆದುಕೊಂಡ ಮತ್ತು ಹಲವಾರು ಜನರನ್ನು ಗಾಯಗೊಳಿಸಿದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬದುಕುಳಿದವರ ಹೇಳಿಕೆಗಳನ್ನು ದಾಖಲಿಸಿಕೊಂಡ ನಂತರ ಗುಪ್ತಚರ ಇಲಾಖೆ ಹಂಚಿಕೊಂಡ ಪಟ್ಟಿಯಿಂದ ಎನ್‌ಐಎ ಅವರನ್ನು ಗುರುತಿಸಿದೆ. ಆಯಾ ರಾಜ್ಯಗಳಲ್ಲಿ ಈ ದಾಳಿ ನಡೆದಿದೆ.

ಎನ್‌ಐಎ ಶಂಕಿತ ಪಟ್ಟಿಯಲ್ಲಿರುವ 14 ಸಕ್ರಿಯ ಭಯೋತ್ಪಾದಕರಲ್ಲಿ ಹೆಚ್ಚಿನವರು 20ರ ಹರೆಯದವರು ಮತ್ತು 2022 ರ ನಂತರ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳನ್ನು ಸೇರಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಸಕ್ರಿಯರಾಗಿದ್ದಾರೆ, ಶೋಪಿಯಾನ್‌ನಲ್ಲಿ ಐದು, ಪುಲ್ವಾಮಾದಲ್ಲಿ ನಾಲ್ಕು, ಅನಂತ್‌ನಾಗ್‌ನಲ್ಲಿ ಎರಡು ಮತ್ತು ಸೋಪೋರ್, ಅವಂತಿಪೋರಾ ಮತ್ತು ಕುಲ್ಗಾಮ್‌ನಲ್ಲಿ ತಲಾ ಒಬ್ಬರು.

ಮೂಲಗಳ ಪ್ರಕಾರ, ಎಲ್‌ಇಟಿಯ ಅಹ್ಸಾನ್ ಶೇಖ್ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾಗಿದೆ, ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿರುವ ಮತ್ತೊಬ್ಬ ಶಂಕಿತ ಶಾಹಿದ್ ಕುಟೇ ಮನೆಯನ್ನು ಸಹ ಧ್ವಂಸಗೊಳಿಸಲಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮತ್ತೊಬ್ಬ ಭಯೋತ್ಪಾದಕ ಜೆಇಎಂನ ಆಸಿಫ್ ಶೇಖ್ ಹೆಸರೂ ಕೇಳಿಬಂದಿದ್ದು, ಇದರರ್ಥ ಪಾಕಿಸ್ತಾನದ ಗೂಢಚಾರ ಸಂಸ್ಥೆ ಐಎಸ್‌ಐ ನಿರ್ದೇಶನದ ಮೇರೆಗೆ ಜೆಇಎಂ ಎಲ್‌ಇಟಿಗೆ ಈ ಹತ್ಯೆಗಳಲ್ಲಿ ಸಹಾಯ ಮಾಡಿರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಈಗಾಗಲೇ ಇಬ್ಬರು ಪಾಕಿಸ್ತಾನಿಗಳು - ಅಲಿ ಭಾಯ್ ಅಲಿಯಾಸ್ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ ಮತ್ತು ಸ್ಥಳೀಯ ಕಾರ್ಯಕರ್ತ ಆದಿಲ್ ಹುಸೇನ್ ಥೋಕರ್ ಸೇರಿದಂತೆ ಮೂವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಅವರ ಪತ್ತೆಹಚ್ಚಿದವರಿಗೆ ತಲಾ 20 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT