ಪಾಕಿಸ್ತಾನ ಬೆಂಬಲಿಗರು  
ದೇಶ

ವಿಭಜನೆಯ ಅಂಚಿನಲ್ಲಿ ಪಾಕಿಸ್ತಾನ: ಭಾರತದ ವಿರುದ್ಧ ದ್ವೇಷದ ಮೂಲಕ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ- RSS

ಕ್ರೌರ್ಯಕ್ಕೆ ಮಿತಿಯಿಲ್ಲದಂತಾಗಿದೆ. ಆದ್ದರಿಂದ, ಎಷ್ಟೇ ಖಂಡಿಸಿದರೂ ಸಾಕಾಗಲ್ಲ. ಇದರಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿರುವವರಿಗೆ ತಕ್ಕ ಪಾಠ ಕಲಿಸಬೇಕು.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಹಿರಿಯ ನಾಯಕ ಇಂದ್ರೇಶ್ ಕುಮಾರ್, ಇದು "ನಾಚಿಕೆಗೇಡಿನ, ಅಸಹ್ಯ ಮತ್ತು ಅವಮಾನಕರ" ಎಂದು ಬಣ್ಣಿಸಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಕ್ರೌರ್ಯಕ್ಕೆ ಮಿತಿಯಿಲ್ಲದಂತಾಗಿದೆ. ಆದ್ದರಿಂದ, ಎಷ್ಟೇ ಖಂಡಿಸಿದರೂ ಸಾಕಾಗಲ್ಲ. ಇದರಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿರುವವರಿಗೆ ತಕ್ಕ ಪಾಠ ಕಲಿಸಬೇಕು. ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲು ನಾವು ಹಿಂದೂಸ್ತಾನಿಗಳು ಎಂದು ಧ್ವನಿ ಎತ್ತಬೇಕು. ನಂತರ ನಾವು ಕಾಶ್ಮೀರಿ, ಡೋಗ್ರಿ, ಪಂಡಿತ್ ಅಂತಾ ಹೇಳಬೇಕು. ಈ ಧ್ವನಿಯೊಂದಿಗೆ ಸೂಕ್ತ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದರು.

ಸಿಂಧ್, ಬಲೂಚಿಸ್ತಾನ್, ಖೈಬರ್ ಪಖ್ತುಂಖ್ವಾ, ಪಿಒಜೆಕೆ ಮತ್ತು ಪಂಜಾಬ್‌ನಂತಹ ಪ್ರದೇಶಗಳು ಸ್ವಾತಂತ್ರ್ಯವನ್ನು ಬಯಸುತ್ತಿರುವಾಗ ಪಾಕಿಸ್ತಾನ ವಿಭಜನೆಯ ಅಂಚಿನಲ್ಲಿದೆ. ಭಾರತದ ವಿರುದ್ಧ ದ್ವೇಷವನ್ನು ಬೆಳೆಸುವ ಪಾಕಿಸ್ತಾನದ ಪ್ರಯತ್ನಗಳು ಅದರ ಪತನವನ್ನು ತಡೆಯಲು ಆಗಲ್ಲ ಎಂದು ಹೇಳಿದರು.

ಸಿಂಧ್, ಬಲೂಚಿಸ್ತಾನ್, ಖೈಬರ್ ಪಖ್ತುಂಖ್ವಾ, ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಂಜಾಬ್ ಪಾಕಿಸ್ತಾನದಿಂದ ಸ್ವಾತಂತ್ರ್ಯವನ್ನು ಕೋರುತ್ತಿವೆ. ಪಾಕಿಸ್ತಾನ ವಿಭಜನೆಯ ಅಂಚಿನಲ್ಲಿದೆ. ಭಾರತದ ವಿರುದ್ಧ ದ್ವೇಷವನ್ನು ಹುಟ್ಟುಹಾಕುವ ಮೂಲಕ ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತೇವೆ ಎಂದು ಅವರು ಭಾವಿಸುತ್ತಿದ್ದಾರೆ ಆದರೆ ಇದು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಹಿರಿಯ ಮುಖಂಡರೊಬ್ಬರು, ಇತ್ತೀಚಿನ ಭಯೋತ್ಪಾದಕ ಘಟನೆಯ ಬಗ್ಗೆ ತೀವ್ರ ತನಿಖೆಯ ಅಗತ್ಯವನ್ನು ಒತ್ತಿ ಹೇಳಿದರು.

ಕಳೆದ 30-40 ವರ್ಷಗಳಲ್ಲಿ, ಅಸಂಖ್ಯಾತ ಅಮಾಯಕರು ಕೊಲ್ಲಲ್ಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆಯಲ್ಲಿ, ಯಾರೂ ಗುರ್ಬಾನಿ ಅಥವಾ ಗೀತಾವನ್ನು ಪಠಿಸಿಲ್ಲ. ಭಯೋತ್ಪಾದನೆಗೆ ಯಾವುದೇ ಧರ್ಮವಿಲ್ಲ ಎಂದು ನಾವು ನಿಜವಾಗಿಯೂ ನಂಬಿದರೆ, ಈ ತತ್ವವನ್ನು ನಿರಂತರವಾಗಿ ಎತ್ತಿಹಿಡಿಯಬೇಕು. ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಉಳಿದ ಭಾಗಗಳು ಎಲ್ಲಾ ರೀತಿಯ ಭಯೋತ್ಪಾದನೆಯಿಂದ ನಿಸ್ಸಂದಿಗ್ಧವಾಗಿ ಬೇರ್ಪಡಿಸಬೇಕೆಂದು ಅವರು ಕರೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT