ಕಟ್ಟಡದಿಂದ ಕೆಳಗೆ ಹಾರಿದ ಯುವತಿ 
ದೇಶ

Video: ಭೀಕರ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 5ನೇ ಅಂತಸ್ತಿನಿಂದ ಹಾರಿದ ಯುವತಿ

ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.

ಅಹ್ಮದಾಬಾದ್: ಗುಜರಾತ್ ರಾಜಧಾನಿ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ಅಗ್ನಿಅವಘಡದಲ್ಲಿ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಕಟ್ಟಡದ 5ನೇ ಅಂತಸ್ತಿನಿಂದ ಕೆಳಗೆ ಹಾರಿದ್ದಾರೆ.

ಅಹ್ಮದಾಬಾದ್ ನ ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ್ಟ್‌ಮೆಂಟ್ ಬೆಂಕಿಯಿಂದ ತಪ್ಪಿಸಿಕೊಳ್ಳಲು ಅಹ್ಮದಾಬಾದ್‌ನ ಐದನೇ ಮಹಡಿಯ ಕಟ್ಟಡದಿಂದ ಜಿಗಿದ ಯುವತಿಯೊಬ್ಬಳು ಬದುಕುಳಿದಿದ್ದಾಳೆ.

ಯುವತಿ ಕೆಳಗೆ ಹಾರುತ್ತಲೇ ಕೆಳಗೆ ಇದ್ದ ಸುಮಾರು 20-25 ಜನರು ಬಲೆ ಅಥವಾ ಬಟ್ಟೆಯಂತಹ ವಸ್ತುವನ್ನು ಬಲೆ ರೀತಿಯಲ್ಲಿ ಹಿಡಿದುಕೊಂಡಿದ್ದು ಯುವತಿ ನೇರವಾಗಿ ಅದರೊಳಗೆ ಬಿದ್ದಿದ್ದಾಳೆ. ಆ ಮೂಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇಂದಿರಾ ಸೇತುವೆ ಪ್ರದೇಶದ ಆಟ್ರೆ ಆರ್ಕಿಡ್‌ನಲ್ಲಿರುವ ತನ್ನ ಅಪಾರ್ಟ್‌ಮೆಂಟ್ ಬಾಲ್ಕನಿಯಿಂದ ಹಾರಿದ ಹೆಸರಿಸದ ಯುವತಿ, ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಾಗ, ಕಿರುಚುತ್ತಾ ಕೆಳಗೆ ಹಾರಿದ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮತ್ತೊಂದು ವೀಡಿಯೊದಲ್ಲಿ, ಒಬ್ಬ ಮಹಿಳೆ ಉರಿಯುತ್ತಿರುವ ಕಟ್ಟಡದಿಂದ ತಪ್ಪಿಸಿಕೊಳ್ಳಲು ಹಗ್ಗವನ್ನು ಬಳಸುತ್ತಿರುವುದನ್ನು ಕಾಣಬಹುದಾಗಿದೆ.

ಇನ್ನು ಅಗ್ನಿ ಅವಘಡ ಕುರಿತು ಮಾಹಿತಿ ಲಭ್ಯವಾಗುತ್ತಲೇ ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದರು. ಅಪಾರ್ಟ್ಮೆಂಟ್ನ 'ಸಿ' ಮತ್ತು 'ಡಿ' ಬ್ಲಾಕ್ ನಲ್ಲಿ ಬೆಂಕಿ ವ್ಯಾಪಕವಾಗಿ ಹಬ್ಬಿತ್ತು. ಮೂಲಗಳ ಪ್ರಕಾರ ಅಪಾರ್ಟ್ ಮೆಂಟ್ ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು ಬಳಿಕ ಬೆಂಕಿ ಕಟ್ಟಡದ ಇತರೆ ಭಾಗಕ್ಕೆ ವ್ಯಾಪಿಸಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT