ಕೋಲ್ಕತಾ ಹೋಟೆಲ್​ನಲ್ಲಿ ಭಾರಿ ಅಗ್ನಿ ಅವಘಡ 
ದೇಶ

ಕೋಲ್ಕತ ಹೋಟೆಲ್​ನಲ್ಲಿ ಭಾರಿ ಅಗ್ನಿ ಅವಘಡ: 15 ಮಂದಿ ಸಜೀವ ದಹನ; ತನಿಖೆಗಾಗಿ SIT ರಚನೆ; Video

ರಿತುರಾಜ್ ಹೋಟೆಲ್ ನ ಆವರಣದಲ್ಲಿ ರಾತ್ರಿ 8.15ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ತಂಡಗಳು ಹಲವು ಮಂದಿಯನ್ನು ರಕ್ಷಿಸಿವೆ.

ಕೊಲ್ಕತ್ತಾ: ಮಧ್ಯ ಕೋಲ್ಕತ್ತಾದ ಮೆಚುಪಟ್ಟಿ ಪ್ರದೇಶದ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಹದಿನೈದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಸಂಜೆ ಸಂಭವಿಸಿದ ಬೆಂಕಿಯಲ್ಲಿ ಇತರ 13 ಜನರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಸಾವನ್ನಪ್ಪಿದವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತ ಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು" ಎಂದು ಪ್ರಧಾನಿ ಕಚೇರಿ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ.

ಮೃತರಲ್ಲಿ 11 ಪುರುಷರು ಸೇರಿದ್ದಾರೆ, ಅವರಲ್ಲಿ ಎಂಟು ಜನರನ್ನು ಇದುವರೆಗೆ ಗುರುತಿಸಲಾಗಿದೆ. ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ 42 ಕೊಠಡಿಗಳಲ್ಲಿ 88 ಅತಿಥಿಗಳು ಇದ್ದರು. ಮೃತರಲ್ಲಿ ಒಂದು ಹುಡುಗ, ಒಬ್ಬ ಹುಡುಗಿ ಮತ್ತು ಒಬ್ಬ ಮಹಿಳೆ ಸೇರಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ನಮ್ಮ ವಿಧಿವಿಜ್ಞಾನ ತಂಡವು ಸುತ್ತುವರಿದಿರುವ ಸ್ಥಳವನ್ನು ಪರಿಶೀಲಿಸುತ್ತಿದೆ" ಎಂದು ಅಧಿಕಾರಿ ಹೇಳಿದರು. ಋತುರಾಜ್ ಹೋಟೆಲ್‌ನಲ್ಲಿ ಮಂಗಳವಾರ ಸಂಜೆ 7:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮೊದಲು ವರದಿಯಾಯಿತು.

ಹತ್ತು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಯಿತು, ಸುಮಾರು 10 ಗಂಟೆಗಳ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಬುಧವಾರ ಬೆಳಿಗ್ಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಎಂಟು ಮಂದಿಯನ್ನು ಗುರುತಿಸಲಾಗಿದೆ" ಎಂದು ರಾಜ್ಯ ಸಚಿವ ಸುಜಿತ್ ಬೋಸ್ ಪಿಟಿಐಗೆ ತಿಳಿಸಿದ್ದಾರೆ. ದುರಂತದ ನಂತರ, ಕೋಲ್ಕತ್ತಾ ಪೊಲೀಸರು ಘಟನೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (SIT)ವನ್ನು ರಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT