ರಕ್ಷಣಾ ಸಚಿವ ರಾಜನಾಥ್ ಸಿಂಗ್ online desk
ದೇಶ

ರಷ್ಯಾದ ವಿಜಯ ದಿವಸ್ ಪರೇಡ್‌ನಲ್ಲಿ ಮೋದಿ ಬದಲು ರಾಜನಾಥ್ ಸಿಂಗ್ ಭಾಗಿ

ಮೇ 9 ರಂದು ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರಣಿ ಸಭೆಗಳನ್ನು ನಡೆಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರಷ್ಯಾ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ.

ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ವಿರುದ್ಧ ಸೋವಿಯತ್ ವಿಜಯದ 80ನೇ ವಾರ್ಷಿಕೋತ್ಸವದ ಅಂಗವಾಗಿ ನಡೆಯಲಿರುವ ವಿಜಯ ದಿವಸ್ ಪರೇಡ್ ನಲ್ಲಿ ಅತಿಥಿಯಾಗಿ ಭಾಗವಹಿಸಲು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಲಾಗಿತ್ತು.

ಆದರೆ ಮೋದಿ ರಷ್ಯಾ ಪ್ರವಾಸ ರದ್ದುಗೊಳಿಸಿದ್ದು, ಮೇ 9 ರಂದು ರಷ್ಯಾದ ವಿಜಯ ದಿವಸ್ ಪರೇಡ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಮೇ 9 ರಂದು ಮಾಸ್ಕೋದಲ್ಲಿ ನಡೆಯಲಿರುವ ಪರೇಡ್ ನಲ್ಲಿ ಭಾಗವಹಿಸಲು ಮೋದಿ ರಷ್ಯಾಗೆ ತೆರಳಬೇಕಿತ್ತು ಆದರೆ ಭಾರತ ಪಾಕ್ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿರುವುದರಿಂದ ಮೋದಿ ರಷ್ಯಾ ಭೇಟಿಯನ್ನು ದಿಢೀರ್ ರದ್ದುಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!

SCROLL FOR NEXT