ನೀರಿನಲ್ಲಿ ಮುಳುಗಿ ಸಾವು(ಸಾಂದರ್ಭಿಕ ಚಿತ್ರ) 
ದೇಶ

ಮಧ್ಯ ಪ್ರದೇಶ: ಜಲಪಾತದಲ್ಲಿ ಮುಳುಗಿ 12ನೇ ತರಗತಿಯ ಮೂವರು ವಿದ್ಯಾರ್ಥಿಗಳು ಸಾವು

ಮೃತ ವಿದ್ಯಾರ್ಥಿಗಳನ್ನು ತನ್ಮಯ್ ಶರ್ಮಾ(ಕಂದಾಯ ಇಲಾಖೆಯ ಪಟ್ವಾರಿ ಅವರ ಮಗ), ಅಶ್ವಿನ್ ಜಾಟ್ ಮತ್ತು ಅಕ್ಷತ್ ಸೋನಿ ಎಂದು ಗುರುತಿಸಲಾಗಿದೆ.

ಭೋಪಾಲ್: ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯ ಹತಿನಾಲಾ-ಬಿಲ್ಧಾ ಜಲಪಾತದಲ್ಲಿ ಸ್ನಾನ ಮಾಡುವಾಗ ಎರಡು ವಿಭಿನ್ನ ಶಾಲೆಗಳ ಹನ್ನೆರಡನೇ ತರಗತಿಯ ಮೂವರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತ ವಿದ್ಯಾರ್ಥಿಗಳನ್ನು ತನ್ಮಯ್ ಶರ್ಮಾ(ಕಂದಾಯ ಇಲಾಖೆಯ ಪಟ್ವಾರಿ ಅವರ ಮಗ), ಅಶ್ವಿನ್ ಜಾಟ್ ಮತ್ತು ಅಕ್ಷತ್ ಸೋನಿ ಎಂದು ಗುರುತಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯು ಶುಕ್ರವಾರ ಶಾಲೆಗಳಲ್ಲಿ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿತು. ಪರಿಣಾಮವಾಗಿ, ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವವರನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿತ್ತು.

ನರಸಿಂಗ್‌ಪುರ ಪಟ್ಟಣದ ಪ್ರತ್ಯೇಕ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಈ ವಿದ್ಯಾರ್ಥಿಗಳು ತಮ್ಮ ಹೆತ್ತವರಿಗೆ ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟುಹೋಗಿದ್ದರು.

"ಆದರೆ ಮೂವರು ಸಂಜೆಯಾದರೂ ಮನೆಗೆ ಹಿಂತಿರುಗದಿದ್ದಾಗ, ಅವರ ಕುಟುಂಬ ಸಂಜೆ 6 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಶೋಧ ಕಾರ್ಯಾಚರಣೆ ಪ್ರಾರಂಭವಾಯಿತು. ಮೂವರು ಹುಡುಗರು ಸ್ಕೂಟರ್ ಮತ್ತು ಮೋಟಾರ್‌ಸೈಕಲ್ ಸೇರಿದಂತೆ ಎರಡು ದ್ವಿಚಕ್ರ ವಾಹನಗಳಲ್ಲಿ ಮನೆಯಿಂದ ಹೊರಟಿದ್ದರು. ಸ್ಕೂಟರ್‌ನಲ್ಲಿ ಜಿಪಿಎಸ್ ವ್ಯವಸ್ಥೆಯನ್ನು ಅಳವಡಿಸಲಾಗಿದ್ದರಿಂದ, ನರಸಿಂಗ್‌ಪುರ ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 40 ಕಿ.ಮೀ ದೂರದಲ್ಲಿ ಕಾಡಿನಲ್ಲಿರುವ ಹತಿನಾಲಾ-ಬಿಲ್ಧಾ ಜಲಪಾತದ ಬಳಿ ಸ್ಕೂಟರ್ ಪತ್ತೆಹಚ್ಚಲಾಯಿತು" ಎಂದು ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿ ಬಿ.ಎಲ್. ತ್ಯಾಗಿ ಹೇಳಿದ್ದಾರೆ.

ಜಲಪಾತದ ಬಳಿ ಒಬ್ಬ ಬಾಲಕನ ಶಾಲಾ ಸಮವಸ್ತ್ರ ಮತ್ತು ಶಾಲಾ ಬ್ಯಾಗ್ ಹಾಗೂ ಇತರ ಇಬ್ಬರು ಬಾಲಕರ ಬಟ್ಟೆಗಳು ಪತ್ತೆಯಾದ ನಂತರ, ಗೃಹರಕ್ಷಕರು, ಸ್ಥಳೀಯ ಪೊಲೀಸರು ಮತ್ತು ಡೈವರ್‌ಗಳ ತಂಡ ರಕ್ಷಣಾ ಕಾರ್ಯಾಚರಣೆ ಚರಣೆ ನಡೆಸಿ,

ರಾತ್ರಿ 11 ರಿಂದ ಬೆಳಗ್ಗೆ 1 ಗಂಟೆಯ ನಡುವೆ ಆಳವಾದ ಜಲಪಾತದಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT