ಪ್ರಾತಿನಿಧಿಕ ಚಿತ್ರ 
ದೇಶ

ದೆಹಲಿ: ಜಾಮೀನಿನ ಮೇಲೆ ಹೊರಗೆ ಬಂದಿದ್ದ ಆರೋಪಿ; ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮೇಲೆ ಗುಂಡು!

ಬುಧವಾರ ಮಹಿಳೆಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಗುರುವಾರ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ನವದೆಹಲಿ: ದೆಹಲಿಯ ವಸಂತ್ ವಿಹಾರ್‌ನಲ್ಲಿ ಕಳೆದ ವರ್ಷ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೊಬ್ಬ ಸಂತ್ರಸ್ತೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕಿಯಾಗಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ಪಿಸಿಆರ್ ವ್ಯಾನ್‌ನಲ್ಲಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಮಹಿಳೆ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಮಹಿಳೆಯನ್ನು ಕೊಲ್ಲಲು ಯತ್ನಿಸಿದ ಆರೋಪದ ಮೇಲೆ ಗುರುವಾರ ಅಬುಜೈರ್ ಸಫಿ (30) ಮತ್ತು ಆತನ ಸಹಚರ ಅಮನ್ ಸುಖ್ಲಾ ಅವರನ್ನು ಶುಕ್ರವಾರ ಬಂಧಿಸಲಾಗಿದೆ.

ಪೊಲೀಸರ ಪ್ರಕಾರ, ಕಪ್ಪು ಬಣ್ಣದ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ಪುರುಷರು ಬುಧವಾರ ಮಹಿಳೆ ಮೇಲೆ ಗುಂಡು ಹಾರಿಸಿದ್ದಾರೆ. ಕಳೆದ ವರ್ಷ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಜಾಮೀನು ಪಡೆದಿದ್ದ ಸಫಿ, ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅವರು ಹೇಳಿದರು.

ಪೊಲೀಸರು ಸ್ಥಳಕ್ಕೆ ತಲುಪಿದಾಗ ಆಟೋರಿಕ್ಷಾ ಪತ್ತೆಯಾಗಿದೆ. ಚಾಲಕ ರಂಜೀತ್ ಯಾದವ್, ತನ್ನ ಪ್ರಯಾಣಿಕ ಮಹಿಳೆಗೆ ಗುಂಡು ತಗುಲಿದೆ ಎಂದು ತಿಳಿಸಿದ್ದಾರೆ. ಮಹಿಳೆಯನ್ನು ಪಿಸಿಆರ್ ವ್ಯಾನ್ ಮೂಲಕ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆಯ ಆಧಾರದ ಮೇಲೆ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸೆಕ್ಷನ್ 109(1) (ಕೊಲೆ ಯತ್ನ) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ವಿಚಾರಣೆಯ ಸಮಯದಲ್ಲಿ, ತನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಕ್ಕಾಗಿ ಸಫಿ ಸಂತ್ರಸ್ತೆ ಮೇಲೆ ಕೋಪಗೊಂಡಿದ್ದ ಎಂದು ತಿಳಿದುಬಂದಿದೆ. ಆತ ಆಕೆಯನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದ್ದನು. ಆದರೆ, ಆಕೆ ಪ್ರತಿಕ್ರಿಯಿಸಲು ನಿರಾಕರಿಸಿದ್ದರು. ಇದು ಆತನ ಕೋಪವನ್ನು ಮತ್ತಷ್ಟು ಹೆಚ್ಚಿಸಿತು' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಅಪರಾಧದಲ್ಲಿ ಬಳಸಲಾದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಂಡಿದ್ದೇವೆ. ಮರುದಿನ, ಆಗಸ್ಟ್ 1 ರಂದು, ಸಫಿಯನ್ನು ಬಂಧಿಸಲಾಗಿದ್ದು, ಗುಂಡು ಹಾರಿಸಲು ಬಳಸಲಾಗಿದೆ ಎನ್ನಲಾದ ಬಂದೂಕನ್ನು ಆತನಿಂದ ವಶಪಡಿಸಿಕೊಳ್ಳಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

'ಇನ್ನಷ್ಟು ಜನರು ಭಾಗಿಯಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಮತ್ತು ಆರೋಪಿಗಳ ಹಿನ್ನೆಲೆಯನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ' ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT