ಅವಘಡ ಸಂಭವಿಸಿದ ಗ್ರಾನೈಟ್ ಕ್ವಾರಿ 
ದೇಶ

Andhra Pradesh: ಗ್ರಾನೈಟ್ ಕ್ವಾರಿಯಲ್ಲಿ ಅವಘಡ; ಆರು ಜನರ ಸಾವು, 10 ಮಂದಿಗೆ ಗಾಯ

ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಉಳಿದ ಇಬ್ಬರನ್ನು ಹೊರತರುವ ಪ್ರಯತ್ನಗಳು ನಡೆಯುತ್ತಿವೆ.

ಗುಂಟೂರು: ಗ್ರಾನೈಟ್ ಕ್ವಾರಿಯಲ್ಲಿ ಬಂಡೆಗಳು ಕುಸಿದು ಬಿದ್ದ ಪರಿಣಾಮ ಆರು ಕಾರ್ಮಿಕರು ಸಾವನ್ನಪ್ಪಿದ್ದು, ಇತರ 10 ಮಂದಿ ಗಾಯಗೊಂಡಿರುವ ಘಟನೆ ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯ ಬಳ್ಳಿಕುರವ ಬಳಿ ಭಾನುವಾರ ನಡೆದಿದೆ.

ರಕ್ಷಣಾ ತಂಡಗಳು ಇದುವರೆಗೆ ನಾಲ್ಕು ಮೃತದೇಹಗಳನ್ನು ಹೊರತೆಗೆದಿದ್ದು, ಅವಶೇಷಗಳಡಿಯಲ್ಲಿ ಸಿಲುಕಿರುವ ಉಳಿದ ಇಬ್ಬರನ್ನು ಹೊರತರುವ ಪ್ರಯತ್ನಗಳು ನಡೆಯುತ್ತಿವೆ. ಘಟನೆ ವೇಳೆ 16 ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಗಾಯಾಳುಗಳನ್ನು ನರಸರಾವ್‌ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕ್ವಾರಿ ನಿರ್ವಹಣೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಅಳವಡಿಸುವಲ್ಲಿ ವಿಫಲವಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಬಾಪಟ್ಲಾ ಜಿಲ್ಲಾಧಿಕಾರಿ ಜೆ. ವೆಂಕಟ ಮುರಳಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ತುಷಾರ್ ದುಡಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಮೃತರನ್ನು ಒಡಿಶಾ ಮೂಲದ ವಲಸೆ ಕಾರ್ಮಿಕರು ಎಂದು ಗುರುತಿಸಲಾಗಿದೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳಿಂದ ವಿವರವಾದ ವರದಿ ಕೇಳಿದ್ದು ಗಾಯಾಳುಗಳಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಖಾತ್ರಿಗೆ ಸೂಚಿಸಿದ್ದಾರೆ. ಅಪಘಾತದ ಕಾರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!