ಕೇಂದ್ರ ಸಚಿವ ಕಿರಣ್ ರಿಜಿಜು  online desk
ದೇಶ

ಸಂಸತ್ತಿನಲ್ಲಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದರೆ ಸರ್ಕಾರದಿಂದ ಚರ್ಚೆ ಇಲ್ಲದೇ ಮಸೂದೆಗಳ ಅಂಗೀಕಾರ: ರಿಜಿಜು

ಸಂಸತ್ತಿನಲ್ಲಿ ಅದರ ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸುವ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಯ SIR ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡಬೇಕೆಂದು ವಿಪಕ್ಷಗಳು ಒತ್ತಾಯಿಸುತ್ತಿವೆ.

ನವದೆಹಲಿ: ಸಂಸತ್ತಿನಲ್ಲಿ ಪ್ರತಿಭಟನೆಗಳ ನಡುವೆಯೂ ಸರ್ಕಾರ ತನ್ನ ಮಸೂದೆಗಳನ್ನು ಅಂಗೀಕರಿಸುವ ಒತ್ತಡ, ಅನಿವಾರ್ಯತೆ ಇದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸೋಮವಾರ ಹೇಳಿದ್ದಾರೆ.

SIR ಕುರಿತು ವಿರೋಧ ಪಕ್ಷದ ನಿರಂತರ ಅಡಚಣೆಗಳು ಉಭಯ ಸದನಗಳ ಸಾಮಾನ್ಯ ಕಾರ್ಯನಿರ್ವಹಣೆಯ ನಿರೀಕ್ಷೆಗಳನ್ನು ಮಂದಗೊಳಿಸಿರುವ ಹಿನ್ನೆಲೆಯಲ್ಲಿ ಸಚಿವ ಕಿರಣ್ ರಿಜಿಜು ಹೇಳಿಕೆ ಬಂದಿದೆ.

ಸೋಮವಾರ ಲೋಕಸಭೆಯಲ್ಲಿ ಪಟ್ಟಿ ಮಾಡಲಾದ ಯಾವುದೇ ವ್ಯವಹಾರಗಳು ಕಡಿಮೆ ನಡೆದಿದ್ದರೂ, ಇಂದು ಬೆಳಿಗ್ಗೆ ನಿಧನರಾದ ತನ್ನ ಸದಸ್ಯ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರ ಗೌರವಾರ್ಥವಾಗಿ ರಾಜ್ಯಸಭೆಯನ್ನು ಮುಂದೂಡಲಾಯಿತು.

ಸರ್ಕಾರ ತನ್ನ ಮಸೂದೆಗಳ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆಯನ್ನು ಬಯಸುತ್ತದೆ ಆದರೆ ಪ್ರಸ್ತಾವಿತ ಶಾಸನಗಳು ಆಡಳಿತಕ್ಕೆ ಮುಖ್ಯವಾದ ಕಾರಣ "ರಾಷ್ಟ್ರೀಯ ಹಿತಾಸಕ್ತಿ" ಯ ದೃಷ್ಟಿಯಿಂದ ಮಂಗಳವಾರದಿಂದ ಅವುಗಳ ಅಂಗೀಕಾರಕ್ಕೆ ಒತ್ತಾಯಿಸಬೇಕಾಗುತ್ತದೆ ಎಂದು ರಿಜಿಜು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸೋಮವಾರ ಲೋಕಸಭೆಯಲ್ಲಿ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಇವೆರಡನ್ನೂ ಒಟ್ಟಿಗೆ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ ಮತ್ತು ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆಯ ಕುರಿತು ಎರಡು ದಿನಗಳ ಚರ್ಚೆಗೆ ಅವರು ಒಪ್ಪಿಕೊಂಡಿದ್ದರು ಆದರೆ ಅವರು ಕಲಾಪಕ್ಕೆ ಅಡ್ಡಿಪಡಿಸಿದರು ಎಂದು ಆರೋಪಿಸಿದ್ದಾರೆ.

ಸಂಸತ್ತಿನಲ್ಲಿ ಅದರ ಶಾಸಕಾಂಗ ಕಾರ್ಯಸೂಚಿಯನ್ನು ಮಂಡಿಸುವ ಮೊದಲು ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಚರ್ಚೆ ನಡೆಸಬೇಕೆಂಬ ತನ್ನ ಬೇಡಿಕೆಗೆ ಸರ್ಕಾರ ಒಪ್ಪಿಗೆ ನೀಡಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಆದಾಗ್ಯೂ, ಚುನಾವಣಾ ಆಯೋಗದ ಆಡಳಿತಾತ್ಮಕ ಕ್ರಮ ಮತ್ತು ಕಾರ್ಯನಿರ್ವಹಣೆಯ ಭಾಗವಾಗಿರುವುದರಿಂದ SIR ಕುರಿತು ಚರ್ಚೆ ಸಂಸತ್ತಿನಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಮಾಜಿ ಸ್ಪೀಕರ್ ಬಲರಾಮ್ ಜಾಖರ್ ಅವರ ತೀರ್ಪನ್ನು ಉಲ್ಲೇಖಿಸಿ, ಸಂಸತ್ತು EC ಯಂತಹ ಸಾಂವಿಧಾನಿಕ ಸಂಸ್ಥೆಯ ಕಾರ್ಯನಿರ್ವಹಣೆಯ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ ಎಂದು ರಿಜಿಜು ಹೇಳಿದ್ದಾರೆ.

ಸಂಸತ್ತು ಚುನಾವಣಾ ಸುಧಾರಣೆಗಳನ್ನು ಚರ್ಚಿಸಬಹುದು ಆದರೆ EC ಯ ಕಾರ್ಯನಿರ್ವಹಣೆಯ ಬಗ್ಗೆ ಅಲ್ಲ ಎಂದು ಅವರು ಹೇಳಿದರು, ಚುನಾವಣಾ ಕಾವಲು ಸಂಸ್ಥೆಯು ಈ ಹಿಂದೆಯೂ SIR ನ್ನು ನಡೆಸಿದೆ ಎಂದು ರಿಜುಜು ಮಾಹಿತಿ ನೀಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಕುರಿತು ಉಭಯ ಸದನಗಳಲ್ಲಿ ಎರಡು ದಿನಗಳ ಚರ್ಚೆಯನ್ನು ಹೊರತುಪಡಿಸಿ, ಜುಲೈ 21 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಸಂಸತ್ತಿನ ಕಲಾಪಗಳು ಸಂಪೂರ್ಣವಾಗಿ ರದ್ದಾಗಿವೆ. ಬಿಹಾರದಲ್ಲಿ SIR ಚಟುವಟಿಕೆಯ ವಿರುದ್ಧ ವಿರೋಧ ಪಕ್ಷಗಳಿಂದ ತೀವ್ರ ಪ್ರತಿಭಟನೆಳು ನಡೆದಿರುವ ಹಿನ್ನೆಲೆಯಲ್ಲಿ ಸಂಸತ್ ಕಲಾಪಕ್ಕೆ ಅಡ್ಡಿ ಉಂಟಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT