ಲೋಕಸಭೆ 
ದೇಶ

ಸಂಸತ್ ಮುಂಗಾರು ಅಧಿವೇಶನ: ಬಿಹಾರ SIR ಕುರಿತ ಚರ್ಚೆಗೆ ವಿಪಕ್ಷ ಬಿಗಿಪಟ್ಟು; ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ!

ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚಿಸಲು ನಿರ್ಣಯ ಮಂಡಿಸಿದರು.

ನವದೆಹಲಿ: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತಿತರ ವಿಚಾರಗಳ ಕುರಿತ ಚರ್ಚೆಗೆ ವಿರೋಧ ಪಕ್ಷಗಳು ಬಿಗಿಪಟ್ಟು ಹಿಡಿದ ಹಿನ್ನೆಲೆಯಲ್ಲಿ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಇಂದು ಬೆಳಗ್ಗೆ ಲೋಕಸಭೆ ಸಮಾವೇಶಗೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್, ಬಿಹಾರದಲ್ಲಿ ವಿಧಾನಸಭೆ ಚುನಾವಣೆಗೂ ಮುನ್ನ ಭಾರತೀಯ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚರ್ಚಿಸಲು ನಿರ್ಣಯ ಮಂಡಿಸಿದರು.

ಬಳಿಕ ಮಾತನಾಡಿದ ಟ್ಯಾಗೋರ್, SIR ದುರ್ಬಲ ಸಮುದಾಯಗಳ ಮೇಲೆ "ಅಸಮಾನವಾಗಿ ಪರಿಣಾಮ ಬೀರಿದೆ. ಇದೇ ರೀತಿಯ "ಉದ್ದೇಶಿತ ಮತದಾನದ ಹಕ್ಕು ನಿರಾಕರಣೆ ಶೀಘ್ರದಲ್ಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಂತಹ ಇತರ ರಾಜ್ಯಗಳಿಗೆ ಹರಡಬಹುದು ಎಂದು ಎಚ್ಚರಿಸಿದರು. ಈ ವಿಚಾರದಲ್ಲಿ ಚರ್ಚೆಗೆ ಪ್ರತಿಪಕ್ಷಗಳು ಗದ್ದಲ ಎಬ್ಬಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಕ್ರೀಡಾ ಕ್ಷೇತ್ರಕ್ಕೆ ಸಂಬಂಧಿಸಿದ ರಾಷ್ಟ್ರೀಯ ಕ್ರೀಡೆಗಳ ನಿಯಂತ್ರಣ ಮಸೂದೆ ಮತ್ತು ರಾಷ್ಟ್ರೀಯ ಉದ್ದೀಪನ ಮದ್ದು ನಿಷೇಧ ತಿದ್ದುಪಡಿ ಮಸೂದೆಗಳನ್ನು ಕೇಂದ್ರ ಸರ್ಕಾರ ಇಂದು ಮಂಡಿಸುವ ಸಾಧ್ಯತೆಯಿದೆ.

ಈ ಮಧ್ಯೆ ಹಾಲಿ ಸಂಸದ ಶಿಬು ಸೊರೇನ್ ನಿಧನದ ಹಿನ್ನೆಲೆಯಲ್ಲಿ ಗೌರವ ಸೂಚಕವಾಗಿ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

ರಾಜ್ಯ ಸರ್ಕಾರದಿಂದ "ಮಹಿಷಾಸುರ ಟ್ಯಾಕ್ಸ್" : ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಬಿಜೆಪಿ ಕಿಡಿ!

Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿ

SCROLL FOR NEXT