ಸಚಿವ ಶಿವಾನಂದ ಎಸ್ ಪಾಟೀಲ್, ಸುಪ್ರೀಂಕೋರ್ಟ್ ಸಾಂದರ್ಭಿಕ ಚಿತ್ರ 
ದೇಶ

ಮಾನನಷ್ಟ ಮೊಕದ್ದಮೆ: ಸಚಿವ ಶಿವಾನಂದ ಎಸ್ ಪಾಟೀಲ್ ಮೇಲ್ಮನವಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು.

ನವದೆಹಲಿ: ಬಿಜೆಪಿ ಶಾಸಕ ಬಸನಗೌಡ ಆರ್ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್ ಪಾಟೀಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಈ ಅರ್ಜಿಯನ್ನು ಇಂದು ವಿಚಾರಣೆಗೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಾಲಯದ ಹೊರಗಡೆ ರಾಜಕೀಯ ಹೋರಾಟ ಇರಲಿ, ಇಲ್ಲಿ ಬೇಡ ಎಂದು ಯಾವಾಗಲೂ ಎಲ್ಲರಿಗೂ ಹೇಳುತ್ತಿರುವುದಾಗಿ ಹೇಳಿದರು. ಬಿ. ಆರ್ ಗವಾಯಿ ಅವರೊಂದಿಗೆ ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ನ್ಯಾಯಪೀಠದಲ್ಲಿದ್ದರು.

ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (BNSS) ಅಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸದ ಕಾರಣ ಯತ್ನಾಳ್ ಅವರ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 28, 2024 ರಂದು ರದ್ದುಗೊಳಿಸಿದ್ದು, ಅರ್ಜಿದಾರರು ಹಾಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿದ್ದಾರೆ ಎಂದು ವಕೀಲರು ಹೇಳಿದರು.

ಅದಕ್ಕೆ ಏನು? ಎಂದು ಪ್ರಶ್ನಿಸಿದ ಸಿಜೆಐ, ರೂ.25,000 ದಂಡದೊಂದಿಗೆ ಅರ್ಜಿಯನ್ನು ವಜಾಗೊಳಿಸಿದರು. ತದನಂತರ ದಂಡವನ್ನು ರೂ.1 ಕೋಟಿಗೆ ಹೆಚ್ಚಿಸಿದರು. ವಕೀಲರ ವಾದದ ಬಳಿಕ ದಂಡವನ್ನು ಮನನ್ನಾ ನ್ಯಾಯಾಲಯ, ಮೇಲ್ಮನವಿ ಹಿಂಪಡೆಯಲು ಅನುಮತಿ ನೀಡಿತು.

2023 ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ರ್‍ಯಾಲಿಯಲ್ಲಿ ಯತ್ನಾಳ್ ನೀಡಿದ ಅವಹೇಳನಕಾರಿ ಹೇಳಿಕೆ ಆರೋಪದಲ್ಲಿ ಪಾಟೀಲ್ ಅವರು ಬಿಎನ್‌ಎಸ್‌ಎಸ್‌ನ ಸೆಕ್ಷನ್ 223 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಯಾತ್ನಾಳ್ ಹೇಳಿಕೆಯಿಂದ ತಮ್ಮ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಹೇಳಿದ್ದರು. ಆದಾಗ್ಯೂ, ಯತ್ನಾಳ್ ಅವರ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel