ಅನಿಲ್ ಅಂಬಾನಿ 
ದೇಶ

Fraud Case: 17,000 ಕೋಟಿ ರೂ ಬ್ಯಾಂಕ್ ಸಾಲ ವಂಚನೆ ಪ್ರಕರಣ; ಇಡಿ ಮುಂದೆ ವಿಚಾರಣೆಗೆ ಅನಿಲ್ ಅಂಬಾನಿ ಹಾಜರು!

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ತಮ್ಮ ಹೇಳಿಕೆ ದಾಖಲಿಸಲು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಅನಿಲ್ ಅಂಬಾನಿ ಆಗಮಿಸಿದರು.

ನವದೆಹಲಿ: ಬೃಹತ್ ಪ್ರಮಾಣದ ಬ್ಯಾಂಕ್‌ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ರಿಲಯನ್ಸ್‌ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ಮಂಗಳವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ತಮ್ಮ ಹೇಳಿಕೆ ದಾಖಲಿಸಲು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಅನಿಲ್ ಅಂಬಾನಿ ಆಗಮಿಸಿದರು.

ಜುಲೈ 24 ರಂದು ಮುಂಬೈನಲ್ಲಿ 50 ಕಂಪನಿಗಳು ಮತ್ತು ಅವರ ವ್ಯವಹಾರಗಳಿಗೆ ಸೇರಿದ 25 ವ್ಯಕ್ತಿಗಳು ಸೇರಿದಂತೆ 35 ಕಡೆಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿ, ಸಮನ್ಸ್ ಜಾರಿ ಮಾಡಿತ್ತು. ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ (R Infra) ಸೇರಿದಂತೆ ಹಲವು ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಂದ ಹಣಕಾಸು ಅಕ್ರಮಗಳು ಮತ್ತು 17,000 ಕೋಟಿ ರೂ.ಗೂ ಹೆಚ್ಚು ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ.

2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕ್ ನೀಡಿದ ಸುಮಾರು 3,000 ಕೋಟಿ ರೂ.ಗಳ ಸಾಲವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಬ್ಯಾಂಕಿನ ಆಂತರಿಕ ಸಾಲ ನೀತಿಯ ಉಲ್ಲಂಘನೆಗಳು ಸೇರಿದಂತೆ ಯೆಸ್ ಬ್ಯಾಂಕ್‌ನ ಸಾಲ ಅನುಮೋದನೆಗಳಲ್ಲಿ ಗಂಭೀರ ಅಕ್ರಮಗಳನ್ನು ಏಜೆನ್ಸಿ ಶಂಕಿಸಿದೆ. ಸಿಬಿಐನ ಎರಡು ಎಫ್ ಐಆರ್ ಗಳು ಮತ್ತು ನಿಯಂತ್ರಕ ಸಂಸ್ಥೆಗಳಾದ ಸೆಬಿ, ನ್ಯಾಷನಲ್ ಹೌಸಿಂಗ್ ಬ್ಯಾಂಕ್, ನ್ಯಾಷನಲ್ ಫೈನಾನ್ಷಿಯಲ್ ರಿಪೋರ್ಟಿಂಗ್ ಅಥಾರಿಟಿ ಮತ್ತು ಬ್ಯಾಂಕ್ ಆಫ್ ಬರೋಡಾ ಸಲ್ಲಿಸಿದ ವರದಿಗಳಿಂದ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ರಿಲಯನ್ಸ್ ಗ್ರೂಪ್ ವಕ್ತಾರರು ಅಕ್ರಮದ ಆರೋಪ ನಿರಾಕರಿಸಿದ್ದಾರೆ. ಮಾರ್ಚ್ 2022 ರಿಂದ ಅಂಬಾನಿ ಆರ್ ಇನ್ಫ್ರಾ ಮಂಡಳಿಯಲ್ಲಿ ಸೇವೆ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಹಿರಂಗಪಡಿಸದ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳ ಅನುಮಾನದ ಜೊತೆಗೆ ಆರ್‌ಸಿಎಂ ಮತ್ತು ಕೆನರಾ ಬ್ಯಾಂಕ್ ನಡುವಿನ ಪ್ರತ್ಯೇಕ 1,050 ಕೋಟಿ ರೂ.ಸಾಲ ವಂಚನೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT