ಅನಿಲ್ ಅಂಬಾನಿ 
ದೇಶ

Fraud Case: 17,000 ಕೋಟಿ ರೂ ಬ್ಯಾಂಕ್ ಸಾಲ ವಂಚನೆ ಪ್ರಕರಣ; ಇಡಿ ಮುಂದೆ ವಿಚಾರಣೆಗೆ ಅನಿಲ್ ಅಂಬಾನಿ ಹಾಜರು!

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ತಮ್ಮ ಹೇಳಿಕೆ ದಾಖಲಿಸಲು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಅನಿಲ್ ಅಂಬಾನಿ ಆಗಮಿಸಿದರು.

ನವದೆಹಲಿ: ಬೃಹತ್ ಪ್ರಮಾಣದ ಬ್ಯಾಂಕ್‌ ಸಾಲ ವಂಚನೆಗೆ ಸಂಬಂಧಿಸಿದ ತನಿಖೆಯಲ್ಲಿ ರಿಲಯನ್ಸ್‌ ಗ್ರೂಪ್‌ ಅಧ್ಯಕ್ಷ ಅನಿಲ್‌ ಅಂಬಾನಿ ಮಂಗಳವಾರ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (PMLA) ತಮ್ಮ ಹೇಳಿಕೆ ದಾಖಲಿಸಲು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿರುವ ಕೇಂದ್ರೀಯ ತನಿಖಾ ಸಂಸ್ಥೆಯ ಕಚೇರಿಗೆ ಅನಿಲ್ ಅಂಬಾನಿ ಆಗಮಿಸಿದರು.

ಜುಲೈ 24 ರಂದು ಮುಂಬೈನಲ್ಲಿ 50 ಕಂಪನಿಗಳು ಮತ್ತು ಅವರ ವ್ಯವಹಾರಗಳಿಗೆ ಸೇರಿದ 25 ವ್ಯಕ್ತಿಗಳು ಸೇರಿದಂತೆ 35 ಕಡೆಗಳಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿ, ಸಮನ್ಸ್ ಜಾರಿ ಮಾಡಿತ್ತು. ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ (R Infra) ಸೇರಿದಂತೆ ಹಲವು ಅನಿಲ್ ಅಂಬಾನಿ ಸಮೂಹ ಸಂಸ್ಥೆಗಳಿಂದ ಹಣಕಾಸು ಅಕ್ರಮಗಳು ಮತ್ತು 17,000 ಕೋಟಿ ರೂ.ಗೂ ಹೆಚ್ಚು ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದಂತೆ ಇಡಿ ತನಿಖೆ ನಡೆಸುತ್ತಿದೆ.

2017 ಮತ್ತು 2019 ರ ನಡುವೆ ಯೆಸ್ ಬ್ಯಾಂಕ್ ನೀಡಿದ ಸುಮಾರು 3,000 ಕೋಟಿ ರೂ.ಗಳ ಸಾಲವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ ಎಂಬುದು ಪ್ರಮುಖ ಆರೋಪವಾಗಿದೆ. ಬ್ಯಾಂಕಿನ ಆಂತರಿಕ ಸಾಲ ನೀತಿಯ ಉಲ್ಲಂಘನೆಗಳು ಸೇರಿದಂತೆ ಯೆಸ್ ಬ್ಯಾಂಕ್‌ನ ಸಾಲ ಅನುಮೋದನೆಗಳಲ್ಲಿ ಗಂಭೀರ ಅಕ್ರಮಗಳನ್ನು ಏಜೆನ್ಸಿ ಶಂಕಿಸಿದೆ. ಸಿಬಿಐನ ಎರಡು ಎಫ್ ಐಆರ್ ಗಳು ಮತ್ತು ನಿಯಂತ್ರಕ ಸಂಸ್ಥೆಗಳಾದ ಸೆಬಿ, ನ್ಯಾಷನಲ್ ಹೌಸಿಂಗ್ ಬ್ಯಾಂಕ್, ನ್ಯಾಷನಲ್ ಫೈನಾನ್ಷಿಯಲ್ ರಿಪೋರ್ಟಿಂಗ್ ಅಥಾರಿಟಿ ಮತ್ತು ಬ್ಯಾಂಕ್ ಆಫ್ ಬರೋಡಾ ಸಲ್ಲಿಸಿದ ವರದಿಗಳಿಂದ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ರಿಲಯನ್ಸ್ ಗ್ರೂಪ್ ವಕ್ತಾರರು ಅಕ್ರಮದ ಆರೋಪ ನಿರಾಕರಿಸಿದ್ದಾರೆ. ಮಾರ್ಚ್ 2022 ರಿಂದ ಅಂಬಾನಿ ಆರ್ ಇನ್ಫ್ರಾ ಮಂಡಳಿಯಲ್ಲಿ ಸೇವೆ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬಹಿರಂಗಪಡಿಸದ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳ ಅನುಮಾನದ ಜೊತೆಗೆ ಆರ್‌ಸಿಎಂ ಮತ್ತು ಕೆನರಾ ಬ್ಯಾಂಕ್ ನಡುವಿನ ಪ್ರತ್ಯೇಕ 1,050 ಕೋಟಿ ರೂ.ಸಾಲ ವಂಚನೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT