ಸುವೇಂದು ಅಧಿಕಾರಿ ಬೆಂಗಾವಲು ವಾಹನದ ಮೇಲೆ ದಾಳಿ 
ದೇಶ

ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಬೆಂಗಾವಲು ವಾಹನದ ಮೇಲೆ ದಾಳಿ

ಟಿಎಂಸಿ ಕಾರ್ಯಕರ್ತರಿಂದ ದಾಳಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಆಡಳಿತರೂಢ ಪಕ್ಷ, ಇದು ಬಿಜೆಪಿ ಸೃಷ್ಟಿಸಿದ "ಉತ್ತಮ ನಾಟಕ" ಎಂದು ಟೀಕಿಸಿದೆ.

ಕೂಚ್ ಬೆಹಾರ್: ಕೂಚ್ ಬೆಹಾರ್ ಜಿಲ್ಲೆಯಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರ ಬೆಂಗಾವಲು ವಾಹನದ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಟಿಎಂಸಿ ಕಾರ್ಯಕರ್ತರಿಂದ ದಾಳಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಆಡಳಿತರೂಢ ಪಕ್ಷ, ಇದು ಬಿಜೆಪಿ ಸೃಷ್ಟಿಸಿದ "ಉತ್ತಮ ನಾಟಕ" ಎಂದು ಟೀಕಿಸಿದೆ.

ಕೂಚ್ ಬೆಹಾರ್ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ಮುನ್ನಡೆಸಲು ಉತ್ತರ ಬಂಗಾಳ ಜಿಲ್ಲೆಗೆ ಆಗಮಿಸಿದ್ದ ಸುವೇಂದು ಅಧಿಕಾರಿ ವಿರುದ್ಧ ಘೋಷಣೆ ಕೂಗಲಾಗಿದ್ದು, ಖಗ್ರಾಬರಿ ಪ್ರದೇಶದ ಬಳಿ ಅವರಿಗೆ ಕಪ್ಪು ಬಾವುಟ ತೋರಿಸಲಾಯಿತು.

ಬಿಜೆಪಿ ನಾಯಕರ ಪ್ರಕಾರ, ಟಿಎಂಸಿ ಪಕ್ಷದ ಧ್ವಜಗಳು ಮತ್ತು ಕಪ್ಪು ಬಾವುಟಗಳನ್ನು ಹಿಡಿದಿದ್ದ ಗುಂಪೊಂದು ಇಂದು ಮಧ್ಯಾಹ್ನ 12.35 ರ ಸುಮಾರಿಗೆ ಸುವೇಂದು ಅಧಿಕಾರಿಯ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಪ್ರತಿಭಟನಾಕಾರರು "ವಾಪಸ್ ಹೋಗಿ" ಘೋಷಣೆಗಳನ್ನು ಕೂಗಿದರು ಮತ್ತು ಸುವೇಂದು ಅಧಿಕಾರಿಯ ವಾಹನದ ಮೇಲೆ ಬೂಟುಗಳನ್ನು ಎಸೆದರು ಎಂದು ವರದಿಯಾಗಿದೆ. ಪೊಲೀಸ್ ಬೆಂಗಾವಲು ವಾಹನ ಸೇರಿದಂತೆ ಅವರ ಬೆಂಗಾವಲು ಪಡೆಯಲ್ಲಿದ್ದ ಕನಿಷ್ಠ ಒಂದು ಕಾರಿನ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ವರದಿಯಾಗಿದೆ.

ಬಿಜೆಪಿ ಈ ದಾಳಿಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ದೂಷಿಸಿದ್ದು, ಇದು "ವಿರೋಧ ಪಕ್ಷದ ನಾಯಕನನ್ನು ಬೆದರಿಸಲು ಪೂರ್ವ ಯೋಜಿತ ಪ್ರಯತ್ನ" ಎಂದು ಹೇಳಿದೆ.

ಆದಾಗ್ಯೂ, ಟಿಎಂಸಿಯ ಯಾವುದೇ ಕಾರ್ಯಕರ್ತರು ಈ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿಲ್ಲ ಮತ್ತು ಈ ದಾಳಿ "ಬಿಜೆಪಿಯೊಳಗಿನ ಆಂತರಿಕ ಕಲಹದ ಪರಿಣಾಮ" ಎಂದು ತಿರುಗೇಟು ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT