ಬಿಹಾರ SIR ವಿರುದ್ಧ ಸಂಸತ್ತಿನಲ್ಲಿ INDIA ಬ್ಲಾಕ್ ಪ್ರತಿಭಟನೆ 
ದೇಶ

ಆಗಸ್ಟ್ 7ಕ್ಕೆ SIR ಬಗ್ಗೆ ಕಾರ್ಯತಂತ್ರ ನಿರ್ಧಾರ: INDIA bloc ನಾಯಕರಿಂದ ಡಿನ್ನರ್ ಮೀಟಿಂಗ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ನವದೆಹಲಿ: ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದ ಬಗ್ಗೆ ಸಂಸತ್ತಿನಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ, ವಿರೋಧ ಪಕ್ಷ ಇಂಡಿಯಾ ಬಣದ ನಾಯಕರು ಆಗಸ್ಟ್ 7ರಂದು ಈ ವಿಷಯದ ಕುರಿತು ಭವಿಷ್ಯದ ಕಾರ್ಯತಂತ್ರವನ್ನು ನಿಶ್ಚಯಿಸಲು ಔತಣಕೂಟ ಸಭೆಯನ್ನು ನಡೆಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಔತಣಕೂಟ ಸಭೆಯನ್ನು ಆಯೋಜಿಸಲಿದ್ದಾರೆ. ನಾಳೆ ದೆಹಲಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ, ಇದರಲ್ಲಿ ಅವರು 2024 ರ ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಚುನಾವಣಾ ಆಯೋಗದ (EC) ವಿರುದ್ಧ ಪುರಾವೆಗಳನ್ನು ಬಹಿರಂಗಪಡಿಸಬಹುದು ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಅಕ್ರಮಗಳನ್ನು ಬಯಲಿಗೆಳೆಯುವುದನ್ನು ಆಣು ಬಾಂಬ್ ಗೆ ಹೋಲಿಸಿದ್ದ ರಾಹುಲ್ ಗಾಂಧಿ, ಅದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದರು. ಗುರುವಾರದ ಸಭೆಯಲ್ಲಿ ಕಾಂಗ್ರೆಸ್ ತನ್ನ ತನಿಖೆ ಬಗ್ಗೆ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಬಹುದು.

ಸಭೆಯಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಾಜರಾತಿಯನ್ನು ದೃಢಪಡಿಸಿದ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, ರಾಹುಲ್ ಗಾಂಧಿ ಅವರು ಸಭೆಗೆ ಉದ್ಧವ್ ಠಾಕ್ರೆ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ 9 ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಿಗದಿಯಾಗಿರುವುದರಿಂದ, ನಾಯಕರು ಜಂಟಿ ಅಭ್ಯರ್ಥಿಯ ಬಗ್ಗೆಯೂ ಚರ್ಚಿಸಲಿದ್ದಾರೆ. ವಿರೋಧ ಪಕ್ಷಗಳು ಆಗಸ್ಟ್ 8 ರಂದು ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ನಡೆಸಲು ಯೋಜಿಸುತ್ತಿವೆ.

ಟಿಎಂಸಿ ಪಕ್ಷದ ಪುನರ್ರಚನೆ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿನ್ನೆ ಅಭಿಷೇಕ್ ಬ್ಯಾನರ್ಜಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ, ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬದಲಾಯಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಎರಡರಿಂದಲೂ ಎಲ್ಲಾ ಎಐಟಿಸಿ ಸಂಸದರೊಂದಿಗೆ ಇಂದು ವರ್ಚುವಲ್ ಸಭೆಯನ್ನು ಕರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT