ಬಿಹಾರ SIR ವಿರುದ್ಧ ಸಂಸತ್ತಿನಲ್ಲಿ INDIA ಬ್ಲಾಕ್ ಪ್ರತಿಭಟನೆ 
ದೇಶ

ಆಗಸ್ಟ್ 7ಕ್ಕೆ SIR ಬಗ್ಗೆ ಕಾರ್ಯತಂತ್ರ ನಿರ್ಧಾರ: INDIA bloc ನಾಯಕರಿಂದ ಡಿನ್ನರ್ ಮೀಟಿಂಗ್

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ನವದೆಹಲಿ: ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯದ ಬಗ್ಗೆ ಸಂಸತ್ತಿನಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ, ವಿರೋಧ ಪಕ್ಷ ಇಂಡಿಯಾ ಬಣದ ನಾಯಕರು ಆಗಸ್ಟ್ 7ರಂದು ಈ ವಿಷಯದ ಕುರಿತು ಭವಿಷ್ಯದ ಕಾರ್ಯತಂತ್ರವನ್ನು ನಿಶ್ಚಯಿಸಲು ಔತಣಕೂಟ ಸಭೆಯನ್ನು ನಡೆಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್, ಆಗಸ್ಟ್ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದರು.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಔತಣಕೂಟ ಸಭೆಯನ್ನು ಆಯೋಜಿಸಲಿದ್ದಾರೆ. ನಾಳೆ ದೆಹಲಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ, ಇದರಲ್ಲಿ ಅವರು 2024 ರ ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಚುನಾವಣಾ ಆಯೋಗದ (EC) ವಿರುದ್ಧ ಪುರಾವೆಗಳನ್ನು ಬಹಿರಂಗಪಡಿಸಬಹುದು ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಅಕ್ರಮಗಳನ್ನು ಬಯಲಿಗೆಳೆಯುವುದನ್ನು ಆಣು ಬಾಂಬ್ ಗೆ ಹೋಲಿಸಿದ್ದ ರಾಹುಲ್ ಗಾಂಧಿ, ಅದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದರು. ಗುರುವಾರದ ಸಭೆಯಲ್ಲಿ ಕಾಂಗ್ರೆಸ್ ತನ್ನ ತನಿಖೆ ಬಗ್ಗೆ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಬಹುದು.

ಸಭೆಯಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ. ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಾಜರಾತಿಯನ್ನು ದೃಢಪಡಿಸಿದ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, ರಾಹುಲ್ ಗಾಂಧಿ ಅವರು ಸಭೆಗೆ ಉದ್ಧವ್ ಠಾಕ್ರೆ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ 9 ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಿಗದಿಯಾಗಿರುವುದರಿಂದ, ನಾಯಕರು ಜಂಟಿ ಅಭ್ಯರ್ಥಿಯ ಬಗ್ಗೆಯೂ ಚರ್ಚಿಸಲಿದ್ದಾರೆ. ವಿರೋಧ ಪಕ್ಷಗಳು ಆಗಸ್ಟ್ 8 ರಂದು ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ನಡೆಸಲು ಯೋಜಿಸುತ್ತಿವೆ.

ಟಿಎಂಸಿ ಪಕ್ಷದ ಪುನರ್ರಚನೆ

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಿನ್ನೆ ಅಭಿಷೇಕ್ ಬ್ಯಾನರ್ಜಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ, ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬದಲಾಯಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಎರಡರಿಂದಲೂ ಎಲ್ಲಾ ಎಐಟಿಸಿ ಸಂಸದರೊಂದಿಗೆ ಇಂದು ವರ್ಚುವಲ್ ಸಭೆಯನ್ನು ಕರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

Video: ಕೊನೆಗೂ ಕೊಟ್ಟ ಮಾತು ಉಳಿಸಿಕೊಂಡ Sunil Gavaskar, ಜೆಮಿಮಾ ಜತೆ ಮ್ಯೂಸಿಕಲ್ ಡ್ಯೂಯೆಟ್!

WPL 2026: 4 ಓವರ್, 1 ಮೇಡನ್.. ಸೌಂದರ್ಯ ಅಷ್ಟೇ ಅಲ್ಲ.. ಪ್ರದರ್ಶನದಲ್ಲೂ ಟಾಪ್.. RCBಯ ಲೇಡಿ ಹೇಜಲ್ವುಡ್ Lauren Bell!

SCROLL FOR NEXT