ತೇಜ್ ಪ್ರತಾಪ್ ಯಾದವ್ 
ದೇಶ

ಬಿಹಾರ ಚುನಾವಣೆ: ಲಾಲು ಪುತ್ರನಿಂದ ಹೊಸ ಮೈತ್ರಿಕೂಟ ರಚನೆ!

ಲಾಲು ಪ್ರಸಾದ್ ಯಾದವ್ ಅವರು ಇತ್ತೀಚೆಗೆ ತೇಜ್ ಪ್ರತಾಪ್ ಯಾದವ್ ಅವರನ್ನು ಆರ್ ಜೆಡಿಯಿಂದ ಉಚ್ಚಾಟಿಸಿದ್ದರು.

ಪಾಟ್ನಾ: ಬಿಹಾರ ಮಾಜಿ ಸಚಿವ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಐದು ಸಣ್ಣ ಪಕ್ಷಗಳ ಮೈತ್ರಿಕೂಟ ರಚಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು ಇತ್ತೀಚೆಗೆ ತೇಜ್ ಪ್ರತಾಪ್ ಯಾದವ್ ಅವರನ್ನು ಆರ್ ಜೆಡಿಯಿಂದ ಉಚ್ಚಾಟಿಸಿದ್ದರು.

ಇಂದು ಐದು ಪಕ್ಷಗಳ ರಾಷ್ಟ್ರೀಯ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ತೇಜ್ ಪ್ರತಾಪ್ ಯಾದವ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ತಾವು ಮಹುವಾ ಸ್ಥಾನದಿಂದ ಸ್ಪರ್ಧಿಸುವುದಾಗಿ ಹೇಳಿದರು.

ವಿಕಾಸ್ ವಂಚಿತ್ ಇನ್ಸಾನ್ ಪಕ್ಷ(ವಿವಿಐಪಿ), ಭೋಜ್‌ಪುರಿ ಜನ ಮೋರ್ಚಾ(ಬಿಜೆಎಂ), ಪ್ರಗತಿಶೀಲ ಜನತಾ ಪಕ್ಷ(ಪಿಜೆಪಿ), ವಾಜಿಬ್ ಅಧಿಕಾರ್ ಪಕ್ಷ(ಡಬ್ಲ್ಯೂಎಪಿ) ಮತ್ತು ಸಂಯುಕ್ತ ಕಿಸಾನ್ ವಿಕಾಸ್ ಪಕ್ಷ(ಎಸ್‌ಕೆವಿಪಿ) ಈ ಐದು ಪಕ್ಷಗಳು ಸೇರಿ ಹೊಸ ಮೈತ್ರಿಕೂಟ ರಚಿಸುತ್ತಿವೆ ಎಂದು ಲಾಲು ಪುತ್ರ ತಿಳಿಸಿದ್ದಾರೆ.

"ಜನ ನನ್ನನ್ನು ಗೇಲಿ ಮಾಡಲು ಸ್ವತಂತ್ರರು. ಆದರೆ ನಾನು ನನ್ನದೇ ಆದ ಹಾದಿಯಲ್ಲಿ ಸಾಗುತ್ತೇನೆ. ಸಾಮಾಜಿಕ ನ್ಯಾಯ, ಸಾಮಾಜಿಕ ಹಕ್ಕುಗಳು ಮತ್ತು ಬಿಹಾರದ ಸಂಪೂರ್ಣ ಪರಿವರ್ತನೆಯನ್ನು ಖಚಿತಪಡಿಸಿಕೊಳ್ಳಲು ನಮ್ಮ ಮೈತ್ರಿಕೂಟ ಒಟ್ಟಾಗಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

"ಜನ ನಮಗೆ ಜನಾದೇಶ ನೀಡಿದರೆ, ನಾವು ರಾಜ್ಯದ ಅಭಿವೃದ್ಧಿಯತ್ತ ಕೆಲಸ ಮಾಡುತ್ತೇವೆ. ರಾಮ್ ಮನೋಹರ್ ಲೋಹಿಯಾ, ಕರ್ಪೂರಿ ಠಾಕೂರ್ ಮತ್ತು ಜಯಪ್ರಕಾಶ್ ನಾರಾಯಣ್ ಅವರ ಕನಸುಗಳನ್ನು ನನಸಾಗಿಸಲು ನಾವು ಕೆಲಸ ಮಾಡುತ್ತೇವೆ" ಎಂದು ತೇಜ್ ಪ್ರತಾಪ್ ಯಾದವ್ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮ

ಬಿಜೆಪಿಗೆ ನೂತನ ಸಾರಥಿ: ಜ. 20ರೊಳಗೆ ನಿತಿನ್ ನಬಿನ್ 'ರಾಷ್ಟ್ರೀಯ ಅಧ್ಯಕ್ಷ'ರಾಗಿ ಆಯ್ಕೆ ಸಾಧ್ಯತೆ!

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವತಿ ಹಿಂಬಾಲಿಸಿ ಕಿರುಕುಳ, ಮೂವರು 'ಕೀಚಕರ' ಅರೆಸ್ಟ್! Video

ಜಮ್ಮು-ಕಾಶ್ಮೀರ: ಭೀಕರ ಅಪಘಾತದಲ್ಲಿ ಸಿಬಿಐ ವಕೀಲ ಶೇಖ್ ಆದಿಲ್ ಸಾವು; ಅಪಘಾತದ ದೃಶ್ಯ ವೈರಲ್!

ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು!

SCROLL FOR NEXT