ಮೇಘಸ್ಪೋಟದ ಚಿತ್ರಣ 
ದೇಶ

ಉತ್ತರಾಖಂಡದಲ್ಲಿ ಭೀಕರ ಪ್ರವಾಹ: ಕೇರಳದ 28 ಪ್ರವಾಸಿಗರು ನಾಪತ್ತೆ

28 ವ್ಯಕ್ತಿಗಳಲ್ಲಿ 20 ಜನ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕೇರಳದವರು ಎಂದು ವರದಿಯಾಗಿದ್ದರೆ, ಉಳಿದ ಎಂಟು ಜನ ಕೇರಳದ ವಿವಿಧ ಜಿಲ್ಲೆಯವರು.

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಧರಾಲಿ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಮೂರು ಗಂಟೆಗಳ ಅವಧಿಯಲ್ಲಿ ಮೂರು ಬಾರಿ ಮೇಘಸ್ಪೋಟವಾಗಿದ್ದು, ಭಾರಿ ಪ್ರವಾಹದಿಂದಾಗಿ ಕೇರಳ ಮೂಲದ 28 ಪ್ರವಾಸಿಗರ ಗುಂಪು ಕಾಣೆಯಾಗಿದೆ ಎಂದು ಅವರ ಕುಟುಂಬ ಸದಸ್ಯರು ಬುಧವಾರ ತಿಳಿಸಿದ್ದಾರೆ.

28 ವ್ಯಕ್ತಿಗಳಲ್ಲಿ 20 ಜನ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕೇರಳದವರು ಎಂದು ವರದಿಯಾಗಿದ್ದರೆ, ಉಳಿದ ಎಂಟು ಜನ ಕೇರಳದ ವಿವಿಧ ಜಿಲ್ಲೆಯವರು ಎಂದು ಗುಂಪಿನಲ್ಲಿರುವ ದಂಪತಿಗಳ ಸಂಬಂಧಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದಂಪತಿಯ ಮಗ ಕೊನೆಯ ಬಾರಿಗೆ ಒಂದು ದಿನದ ಹಿಂದೆ ಅವರೊಂದಿಗೆ ಮಾತನಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಆ ದಿನ ಬೆಳಗ್ಗೆ 8.30 ರ ಸುಮಾರಿಗೆ ಅವರು ಉತ್ತರಕಾಶಿಯಿಂದ ಗಂಗೋತ್ರಿಗೆ ತೆರಳುತ್ತಿದ್ದರು. ಆ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದೆ. ಅವರನ್ನು ಸಂಪರ್ಕಿಸಲು ನಮಗೆ ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

10 ದಿನಗಳ ಉತ್ತರಾಖಂಡ ಪ್ರವಾಸವನ್ನು ಏರ್ಪಡಿಸಿದ ಹರಿದ್ವಾರ ಮೂಲದ ಟ್ರಾವೆಲ್ ಏಜೆನ್ಸಿಯು, ಈ ಪ್ರವಾಸಿಗರ ಗುಂಪಿನ ಇರುವಿಕೆಯ ಕುರಿತು ಯಾವುದೇ ಮಾಹಿತಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅವರು ತಿಳಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮೇಘಸ್ಫೋಟದ ನಂತರ ಸಂಭವಿಸಿದ ಭಾರಿ ಪ್ರವಾಹದಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂಬತ್ತು ಸೇನಾ ಸಿಬ್ಬಂದಿ ಸೇರಿದಂತೆ 59 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಪರಿಹಾರ ತಂಡಗಳಿಂದ ಬೃಹತ್ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೊಂದು F-18 ಫೈಟರ್ ಜೆಟ್ ಹೊಡೆದುರುಳಿಸಿದ್ದೇವೆ ಎಂದ Iran, ಬೆಚ್ಚಿದ ಅಮೆರಿಕದಿಂದ Fact-Check

ಯುದ್ದದಲ್ಲಿ ಗೆದ್ದು ಕೂಡ ಸೋಲುತ್ತಿರುವ ಅಮೇರಿಕಾ ಮತ್ತು ಚೀನಾ! (ಹಣಕ್ಲಾಸು)

ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!

ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

'ಜೀವ ಬಾಯಿಗೆ ಬಂದಿತ್ತು': ಆಗಸದಲ್ಲೇ ಗಿರಕಿ ಹೊಡೆದ ಡಿಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ, ಕೆಲಕಾಲ ಆತಂಕ! ಆಗಿದ್ದೇನು?

SCROLL FOR NEXT