ಪ್ರಿಯಾಂಕಾ ಮತ್ತು ರಾಹುಲ್ ಗಾಂಧಿ 
ದೇಶ

'ನಿಜವಾದ ಭಾರತೀಯ ಯಾರೆಂದು ಸುಪ್ರೀಂ ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ': ಪ್ರಿಯಾಂಕಾ ವಿರುದ್ಧ BJP ನ್ಯಾಯಾಂಗ ನಿಂದನೆ ಅರ್ಜಿ

ಪ್ರಿಯಾಂಕಾ ಗಾಂಧಿಯವರ ಸಾರ್ವಜನಿಕ ಹೇಳಿಕೆಯು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ಬಿಜೆಪಿ ಸಂಸದ ಮತ್ತು ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಆರೋಪಿಸಿದ್ದಾರೆ.

ನವದೆಹಲಿ: ಚೀನಾ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಾಗಿ ಬಿಜೆಪಿ ಬುಧವಾರ ತಿಳಿಸಿದೆ.

ಪ್ರಿಯಾಂಕಾ ಗಾಂಧಿಯವರ ಸಾರ್ವಜನಿಕ ಹೇಳಿಕೆಯು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ಬಿಜೆಪಿ ಸಂಸದ ಮತ್ತು ಹಿರಿಯ ವಕೀಲ ಮನನ್ ಕುಮಾರ್ ಮಿಶ್ರಾ ಆರೋಪಿಸಿದ್ದಾರೆ.

ANI ಜೊತೆ ಮಾತನಾಡಿದ ಮಿಶ್ರಾ, "ಅವರು ಮಾಧ್ಯಮಗಳ ಮುಂದೆ ಹಲವು ಹೇಳಿಕೆಗಳನ್ನು ನೀಡುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿದ ಅವರ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಿದ್ದೇವೆ. ವಕೀಲರು ಅರ್ಜಿಯನ್ನು ಸಲ್ಲಿಸುತ್ತಾರೆ. ಈ ದೇಶದ ಜನ ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಸಹಿಸುವುದಿಲ್ಲ" ಎಂದಿದ್ದಾರೆ.

ಚೀನಾ ಭಾರತದ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿತ್ತು ಮತ್ತು ನೀವು ನಿಜವಾದ ಭಾರತೀಯ ಆಗಿದ್ದರೆ ಈ ರೀತಿ ಹೇಳಿಕೆ ನೀಡುತ್ತಿರಲಿಲ್ಲ ಎಂದು ಹೇಳಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಿಯಾಂಕಾ ಗಾಂಧಿ, ಯಾರು ನಿಜವಾದ ಭಾರತೀಯ ಎಂದು ಸುಪ್ರೀಂಕೋರ್ಟ್​ ನ್ಯಾಯಾಧೀಶರು ನಿರ್ಧರಿಸಲು ಸಾಧ್ಯವಿಲ್ಲ ಮತ್ತು ಇದು ಅವರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT