ಗುಜರಾತ್ BJP ನಾಯಕನ ಪೋಸ್ಟ್ ವೈರಲ್ 
ದೇಶ

'ಬಿಜೆಪಿ ಹಟಾವೋ, ದೇಶ್ ಬಚಾವೋ': ಗುಜರಾತ್ BJP ನಾಯಕನ ಪೋಸ್ಟ್ ವೈರಲ್!

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಅಹಮದಾಬಾದ್: ಭಾವನಗರ ನಗರ ಬಿಜೆಪಿ ಮಾಜಿ ಅಧ್ಯಕ್ಷ ಯೋಗೇಶ್ ಬದಾನಿ ಅವರ ಫೇಸ್‌ಬುಕ್ ಖಾತೆಯಲ್ಲಿ 'ಬಿಜೆಪಿ ಹಟಾವೋ, ದೇಶ್ ಬಚಾವೋ' ಎಂಬ ಪೋಸ್ಟ್ ಹಾಕಲಾಗಿದ್ದು, ಈ ಪೋಸ್ಟ್ ತೀವ್ರ ಆಕ್ರೋಶಕ್ಕೆ ಕಾರಣವಾಯಿತು ಮತ್ತು 13 ನಿಮಿಷಗಳ ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಇದು ಪಕ್ಷದ ಆಂತರಿಕ ವಲಯಗಳಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

"ಬಿಜೆಪಿ ಹಟಾವೋ, ದೇಶ್ ಬಚಾವೋ" ಎಂಬ ಸ್ಫೋಟಕ ಘೋಷಣೆಯನ್ನು ಹೊಂದಿದ್ದ ಪೋಸ್ಟ್ ಅನ್ನು ಬದಾನಿ ಅವರ ಅಧಿಕೃತ ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು.

ವಿವಾದ ತೀವ್ರಗೊಳ್ಳುತ್ತಿದ್ದಂತೆ, ಮೌನ ಮುರಿದ ಯೋಗೇಶ್ ಬದಾನಿ ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

"ನನ್ನ ಲಾಗಿನ್ ಮಾಹಿತಿ ಹೊಂದಿದ್ದ ಯಾರೋ ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಬೆಂಬಲಿಗರೊಬ್ಬರು ನನಗೆ ಈ ಬಗ್ಗೆ ಮಾಹಿತಿ ನೀಡಿದರು, ಮತ್ತು ನಾನು ತಕ್ಷಣ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ" ಎಂದು ಬದಾನಿ ಹೇಳಿದ್ದಾರೆ.

ಈ ಗದ್ದಲದ ನಡುವೆಯೇ, ಭಾವನಗರ ಬಿಜೆಪಿಯ ಪ್ರಸ್ತುತ ಅಧ್ಯಕ್ಷ ಕುಮಾರ್‌ಭಾಯ್ ಶಾ ಅವರು ಬದಾನಿಯವರ ಹೇಳಿಕೆಯನ್ನು ಬೆಂಬಲಿಸುತ್ತಾ, "ಯೋಗೇಶ್ ಭಾಯ್ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ".

ಬದಾನಿ ರಾಜಕೀಯವಾಗಿ ಹಗುರ ವ್ಯಕ್ತಿ ಅಲ್ಲ; ಅವರು ಮೂರು ದಶಕಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ, 2004 ರಿಂದ 2007 ರವರೆಗೆ ಭಾವನಗರ ನಗರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಎರಡು ಬಾರಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT