ಗುಜರಾತ್ BJP ನಾಯಕನ ಪೋಸ್ಟ್ ವೈರಲ್ 
ದೇಶ

'ಬಿಜೆಪಿ ಹಟಾವೋ, ದೇಶ್ ಬಚಾವೋ': ಗುಜರಾತ್ BJP ನಾಯಕನ ಪೋಸ್ಟ್ ವೈರಲ್!

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ಅಹಮದಾಬಾದ್: ಭಾವನಗರ ನಗರ ಬಿಜೆಪಿ ಮಾಜಿ ಅಧ್ಯಕ್ಷ ಯೋಗೇಶ್ ಬದಾನಿ ಅವರ ಫೇಸ್‌ಬುಕ್ ಖಾತೆಯಲ್ಲಿ 'ಬಿಜೆಪಿ ಹಟಾವೋ, ದೇಶ್ ಬಚಾವೋ' ಎಂಬ ಪೋಸ್ಟ್ ಹಾಕಲಾಗಿದ್ದು, ಈ ಪೋಸ್ಟ್ ತೀವ್ರ ಆಕ್ರೋಶಕ್ಕೆ ಕಾರಣವಾಯಿತು ಮತ್ತು 13 ನಿಮಿಷಗಳ ನಂತರ ಅದನ್ನು ಡಿಲೀಟ್ ಮಾಡಲಾಗಿದೆ. ಇದು ಪಕ್ಷದ ಆಂತರಿಕ ವಲಯಗಳಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.

ಬದಾನಿ ಅವರು ತಮ್ಮ ಖಾತೆಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರೂ, ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳು ವ್ಯಾಪಕ ವೈರಲ್ ಆಗಿದ್ದು, ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

"ಬಿಜೆಪಿ ಹಟಾವೋ, ದೇಶ್ ಬಚಾವೋ" ಎಂಬ ಸ್ಫೋಟಕ ಘೋಷಣೆಯನ್ನು ಹೊಂದಿದ್ದ ಪೋಸ್ಟ್ ಅನ್ನು ಬದಾನಿ ಅವರ ಅಧಿಕೃತ ಖಾತೆಯಿಂದ ಹಂಚಿಕೊಳ್ಳಲಾಗಿದ್ದು, ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಯಿತು.

ವಿವಾದ ತೀವ್ರಗೊಳ್ಳುತ್ತಿದ್ದಂತೆ, ಮೌನ ಮುರಿದ ಯೋಗೇಶ್ ಬದಾನಿ ತಮ್ಮ ಫೇಸ್‌ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

"ನನ್ನ ಲಾಗಿನ್ ಮಾಹಿತಿ ಹೊಂದಿದ್ದ ಯಾರೋ ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಬೆಂಬಲಿಗರೊಬ್ಬರು ನನಗೆ ಈ ಬಗ್ಗೆ ಮಾಹಿತಿ ನೀಡಿದರು, ಮತ್ತು ನಾನು ತಕ್ಷಣ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ" ಎಂದು ಬದಾನಿ ಹೇಳಿದ್ದಾರೆ.

ಈ ಗದ್ದಲದ ನಡುವೆಯೇ, ಭಾವನಗರ ಬಿಜೆಪಿಯ ಪ್ರಸ್ತುತ ಅಧ್ಯಕ್ಷ ಕುಮಾರ್‌ಭಾಯ್ ಶಾ ಅವರು ಬದಾನಿಯವರ ಹೇಳಿಕೆಯನ್ನು ಬೆಂಬಲಿಸುತ್ತಾ, "ಯೋಗೇಶ್ ಭಾಯ್ ಅವರ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ".

ಬದಾನಿ ರಾಜಕೀಯವಾಗಿ ಹಗುರ ವ್ಯಕ್ತಿ ಅಲ್ಲ; ಅವರು ಮೂರು ದಶಕಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ, 2004 ರಿಂದ 2007 ರವರೆಗೆ ಭಾವನಗರ ನಗರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಎರಡು ಬಾರಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT