ಸಾಂದರ್ಭಿಕ ಚಿತ್ರ 
ದೇಶ

Uttar Pradesh: ಮಸೀದಿ, ಈದ್ಗಾ ಸೇರಿದಂತೆ ಸುಮಾರು 130 ಅಕ್ರಮ ಕಟ್ಟಡ ಧ್ವಂಸಗೊಳಿಸಿದ ಯೋಗಿ ಸರ್ಕಾರ!

ಪಿಲಿಭಿತ್, ಶ್ರಾವಸ್ತಿ, ಬಲ್ರಾಮ್‌ಪುರ, ಬಹ್ರೈಚ್, ಲಖಿಂಪುರ ಖೇರಿ, ಸಿದ್ಧಾರ್ಥನಗರ ಮತ್ತು ಮಹಾರಾಜ್‌ಗಂಜ್‌ನಾದ್ಯಂತ ಅಕ್ರಮ ಕಟ್ಟಡಗಳನ್ನು ಗುರಿಯಾಗಿಸಿ ಧ್ವಂಸ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಲಖನೌ: ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಮುಂದುವರೆಸಿರುವ ಉತ್ತರ ಪ್ರದೇಶ ಸರ್ಕಾರ, ಕಳೆದ ಎರಡು ತಿಂಗಳ ಅವಧಿಯಲ್ಲಿ 130 ಅನಧಿಕೃತ ಕಟ್ಟಡಗಳನ್ನು ಧ್ವಂಸಗೊಳಿಸಿದೆ. ವಿಶೇಷವಾಗಿ ರಾಜ್ಯದ ಏಳು ಜಿಲ್ಲೆಗಳನ್ನು ವ್ಯಾಪಿಸಿರುವ ಇಂಡೋ-ನೇಪಾಳ ಗಡಿಯಲ್ಲಿ 198 ಕಟ್ಟಡಗಳನ್ನು ಸೀಜ್ ಮಾಡಿದ್ದು, ಅಂತಹ 223 ಕಟ್ಟಡಗಳಿಗೆ ನೋಟಿಸ್ ನೀಡಿದೆ.

ಪಿಲಿಭಿತ್, ಶ್ರಾವಸ್ತಿ, ಬಲ್ರಾಮ್‌ಪುರ, ಬಹ್ರೈಚ್, ಲಖಿಂಪುರ ಖೇರಿ, ಸಿದ್ಧಾರ್ಥನಗರ ಮತ್ತು ಮಹಾರಾಜ್‌ಗಂಜ್‌ನಾದ್ಯಂತ ಅಕ್ರಮ ಕಟ್ಟಡಗಳನ್ನು ಗುರಿಯಾಗಿಸಿ ಧ್ವಂಸ ಕಾರ್ಯಾಚರಣೆ ನಡೆಸಲಾಗುತ್ತಿದೆ. ಶ್ರಾವಸ್ತಿಯಲ್ಲಿ ಅತಿ ಹೆಚ್ಚು 149 ಅಕ್ರಮ ಕಟ್ಟಡಗಳನ್ನು ಗುರುತಿಸಲಾಗಿದೆ.

ಭಾರತ-ನೇಪಾಳ ಗಡಿಯ 10 ಕಿಮೀ ವ್ಯಾಪ್ತಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿ, ಈದ್ಗಾ, ಮದರಸಾಗಳು ಮತ್ತು ಮಜರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಶ್ರಾವಸ್ತಿಯಲ್ಲಿ ಇದುವರೆಗೆ 149 ಅಕ್ರಮ ಕಟ್ಟಡಗಳನ್ನು ಗುರುತಿಸಿ ನೋಟಿಸ್ ನೀಡಲಾಗಿದೆ. ಈ ಪೈಕಿ 140ನ್ನು ಸೀಜ್ ಮಾಡಿದ್ದು, 37 ಅನ್ನು ಧ್ವಂಸಗೊಳಿಸಲಾಗಿದೆ ಎಂದು ಶ್ರಾವಸ್ತಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಜಯ್ ಕುಮಾರ್ ದ್ವಿವೇದಿ ತಿಳಿಸಿದ್ದಾರೆ.

ಲಖೀಂಪುರ ಖೇರಿ ಜಿಲ್ಲೆಯಲ್ಲಿ ಒಟ್ಟು 13 ಅಕ್ರಮ ಕಟ್ಟಡಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದುರ್ಗಾ ಶಕ್ತಿ ನಾಗ್ಪಾಲ್ ತಿಳಿಸಿದ್ದಾರೆ. ಈ ಪೈಕಿ ಮೂರು ಕಟ್ಟಡಗಳನ್ನು ಧ್ವಂಸ ಮಾಡಲಾಗಿದ್ದು, 10 ಕಟ್ಟಡಗಳನ್ನು ಸೀಜ್ ಮಾಡಲಾಗಿದೆ ಮತ್ತು ಒಬ್ಬರಿಗೆ ನೋಟಿಸ್ ನೀಡಲಾಗಿದೆ.

ಅದೇ ರೀತಿ ಪೂರ್ವ ಯುಪಿಯ ಮಹಾರಾಜ್‌ಗಂಜ್‌ನಲ್ಲಿ, ಗುರುತಿಸಲಾದ 45 ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅದರಲ್ಲಿ 24 ಅನ್ನು ಸೀಜ್ ಮಾಡಲಾಗಿದ್ದು, 31 ಕಟ್ಟಡಗಳನ್ನು ಧ್ವಂಸ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ, ಗಡಿ ಜಿಲ್ಲೆಗಳಲ್ಲಿ ಅಕ್ರಮ ಕಟ್ಟಡಗಳ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT