ಕಂದಕಕ್ಕೆ ಉರುಳಿಬಿದ್ದ ಸಿಆರ್‌ಪಿಎಫ್ ವಾಹನ 
ದೇಶ

ಜಮ್ಮು ಮತ್ತು ಕಾಶ್ಮೀರ: ಸೇನಾ ವಾಹನ ಕಂದಕಕ್ಕೆ ಉರುಳಿ ಮೂವರು CRPF ಯೋಧರು ಸಾವು

ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಬಂಕರ್ ವಾಹನದಲ್ಲಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಗುರುವಾರ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮ ಆರೈಕೆ ಮತ್ತು ಸಹಾಯ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಬಸಂತ್ ಘರ್‌ನಿಂದ ಕಾರ್ಯಾಚರಣೆ ಮುಗಿಸಿ ಬಂಕರ್ ವಾಹನದಲ್ಲಿ ಸಿಬ್ಬಂದಿ ಹಿಂತಿರುಗುತ್ತಿದ್ದಾಗ ಕಡ್ವಾ ಪ್ರದೇಶದಲ್ಲಿ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಪಡೆಯ 187 ಬೆಟಾಲಿಯನ್‌ಗೆ ಸೇರಿದ ಈ ವಾಹನದಲ್ಲಿ 23 ಸಿಬ್ಬಂದಿ ಇದ್ದರು. ಇಬ್ಬರು ಸಿಬ್ಬಂದಿ ಸ್ಥಳದಲ್ಲೇ ಸಾವಿಗೀಡಾದರೆ, ಇತರ 16 ಮಂದಿ ಗಾಯಗೊಂಡರು.

ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡಿದ್ದವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

'ದೇಶಕ್ಕೆ ಅವರು ನೀಡಿದ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಾಧ್ಯವಾದಷ್ಟು ಉತ್ತಮ ಆರೈಕೆ ಮತ್ತು ಸಹಾಯ ಒದಗಿಸುವಂತೆ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ' ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ X ನಲ್ಲಿ ಹೇಳಿದ್ದಾರೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಂತಾಪ ಸೂಚಿಸಿದ್ದು, ವಾಹನವು CRPF ನ ಹಲವಾರು ಧೈರ್ಯಶಾಲಿ ಯೋಧರನ್ನು ಹೊತ್ತೊಯ್ಯುತ್ತಿತ್ತು. ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ತಕ್ಷಣವೇ ರಕ್ಷಣಾ ಕ್ರಮಗಳನ್ನು ಪ್ರಾರಂಭಿಸಲಾಗಿದೆ. ಸ್ಥಳೀಯರು ಸ್ವಯಂಪ್ರೇರಣೆಯಿಂದ ಸಹಾಯ ಮಾಡುತ್ತಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯ ಮಾಡಲಾಗುತ್ತದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT