ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ಹಳಿತಪ್ಪಿದ ಎರಡು ಗೂಡ್ಸ್ ರೈಲು, ಸಂಚಾರದಲ್ಲಿ ಭಾರಿ ವ್ಯತ್ಯಯ

ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಸೆರೈಕೆಲಾ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯ ಚಾಂಡಿಲ್ ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ಎರಡು ಗೂಡ್ಸ್ ರೈಲುಗಳ 20ಕ್ಕೂ ಹೆಚ್ಚು ಬೋಗಿಗಳು ಹಳಿತಪ್ಪಿದ್ದು, ಆಗ್ನೇಯ ರೈಲ್ವೆಯ ಚಾಂಡಿಲ್-ಟಾಟಾನಗರ ವಿಭಾಗದ ನಡುವಿನ ರೈಲು ಸೇವೆಯ ಮೇಲೆ ಪರಿಣಾಮ ಬೀರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಯಾರಿಗೂ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ರೈಲು ಹಳಿತಪ್ಪಿದ ಪರಿಣಾಮ ಚಾಂಡಿಲ್‌ನಿಂದ ಹೊರಡುವ ಮತ್ತು ಆಗಮಿಸುವ ರೈಲು ಸೇವೆಗಳಲ್ಲಿ ವ್ಯತ್ಯಯವಾಗಿದೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ(ಆದ್ರಾ ವಿಭಾಗ) ವಿಕಾಶ್ ಕುಮಾರ್ ಅವರು ತಿಳಿಸಿದ್ದಾರೆ.

ಹಳಿ ಪುನಃಸ್ಥಾಪನೆ ಕಾರ್ಯ ನಡೆಯುತ್ತಿದೆ, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪಾಟ್ನಾ-ಟಾಟಾನಗರ ವಂದೇ ಭಾರತ್ ಎಕ್ಸ್‌ಪ್ರೆಸ್, ಟಾಟಾ-ಕತಿಹಾರ್ ಎಕ್ಸ್‌ಪ್ರೆಸ್, ಟಾಟಾ-ಆರಾ ಎಕ್ಸ್‌ಪ್ರೆಸ್ ರೈಲು ರದ್ದಾಗಿವೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

Delhi blast: ಪ್ರಮುಖ ಆರೋಪಿಯ ಸಹಚರನನ್ನು ಬಂಧಿಸಿದ NIA

Delhi blast: ಆಸ್ಪತ್ರೆಯಲ್ಲಿ ಮತ್ತೆ ಇಬ್ಬರು ಸಾವು; ಸಾವಿನ ಸಂಖ್ಯೆ 15ಕ್ಕೆ ಏರಿಕೆ

'ವಿದೇಶದಲ್ಲಿ ವಾಸ, 20 ಕೋಟಿ ರೂ ಆದಾಯ': Piracy ಮಾಸ್ಟರ್ ಮೈಂಡ್ Ravi immadi ಸಿಕ್ಕಿಬಿದ್ದಿದ್ದೇ ರೋಚಕ; ಪತ್ನಿಯೇ ತೋಡಿದ್ದಳು ಗುಂಡಿ!

SCROLL FOR NEXT