ಭಾರತದ ರಕ್ಷಣಾ ಉತ್ಪಾದನೆ (ಸಂಗ್ರಹ ಚಿತ್ರ) 
ದೇಶ

India's Defence Production: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಭಾರತದ ರಕ್ಷಣಾ ಉತ್ಪಾದನೆ, ಒಂದೇ ವರ್ಷದಲ್ಲಿ 1.5 ಲಕ್ಷ ಕೋಟಿ ರೂ ಗೆ ಏರಿಕೆ!

2024-25ರಲ್ಲಿ ಭಾರತದ ವಾರ್ಷಿಕ ರಕ್ಷಣಾ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ ರೂ. 1,50,590 ಕೋಟಿ ತಲುಪಿದೆ.

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಭಾರತದ ರಕ್ಷಣಾ ಉತ್ಪಾದನೆ ಗರಿಷ್ಠ ಮಟ್ಟಕ್ಕೇರಿದ್ದು, ಒಂದೇ ವರ್ಷದಲ್ಲಿ 1.5 ಲಕ್ಷ ಕೋಟಿ ರೂ.ಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿದೆ.

ಹೌದು.. 2024-25ನೇ ಆರ್ಥಿಕ ವರ್ಷದಲ್ಲಿ ಭಾರತದ ರಕ್ಷಣಾ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ ಮಟ್ಟ ಅಂದರೆ ಬರೊಬ್ಬರಿ 1.5 ಲಕ್ಷ ಕೋಟಿ ರೂ.ಗೂ ಹೆಚ್ಚಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಮಾಹಿತಿ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ರಾಜನಾಥ್ ಸಿಂಗ್, '2024-25ರಲ್ಲಿ ಭಾರತದ ವಾರ್ಷಿಕ ರಕ್ಷಣಾ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ ರೂ. 1,50,590 ಕೋಟಿ ತಲುಪಿದೆ.

ಇದು ಹಿಂದಿನ ಹಣಕಾಸು ವರ್ಷದ ಒಟ್ಟು ರೂ. 1.27 ಲಕ್ಷ ಕೋಟಿಗಿಂತ ಸುಮಾರು ಶೇ. 18 ರಷ್ಟು ಬೆಳವಣಿಗೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಾರತದ ರಕ್ಷಣಾ ಉತ್ಪಾದನೆಯು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಹೇಳಿದರು.

ಅಂತೆಯೇ 'ವಾರ್ಷಿಕ ರಕ್ಷಣಾ ಉತ್ಪಾದನೆಯು 2024-25ರ ಹಣಕಾಸು ವರ್ಷದಲ್ಲಿ ರೂ. 1,50,590 ಕೋಟಿಗೆ ಏರಿದೆ. ಈ ಸಂಖ್ಯೆಗಳು ಹಿಂದಿನ ಹಣಕಾಸು ವರ್ಷದ ರೂ. 1.27 ಲಕ್ಷ ಕೋಟಿ ಉತ್ಪಾದನೆಗಿಂತ ಶೇ. 18 ರಷ್ಟು ಬಲವಾದ ಬೆಳವಣಿಗೆಯನ್ನು ಸೂಚಿಸುತ್ತವೆ.

2019-20 ರಿಂದ ಶೇ. 90 ರಷ್ಟು ಹೆಚ್ಚಳವಾಗಿದೆ, ಆಗ ಈ ಸಂಖ್ಯೆ ರೂ. 79,071 ಕೋಟಿ ಆಗಿತ್ತು" ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಉತ್ಪಾದನಾ ಇಲಾಖೆ ಮತ್ತು ರಕ್ಷಣಾ ಸಾರ್ವಜನಿಕ ವಲಯದ ಘಟಕಗಳು ಮತ್ತು ಖಾಸಗಿ ಉದ್ಯಮ ಸೇರಿದಂತೆ ಎಲ್ಲಾ ಪಾಲುದಾರರ "ಸಾಮೂಹಿಕ ಪ್ರಯತ್ನಗಳನ್ನು" ಶ್ಲಾಘಿಸಿದರು. ಅಲ್ಲದೆ "ಹೆಗ್ಗುರುತು" ಎಂದು ಕರೆದದ್ದನ್ನು ಸಾಧಿಸುವಲ್ಲಿ ಇದು ಸ್ಪಷ್ಟ ಸೂಚಕವಾಗಿದೆ.

ಈ ಮೇಲ್ಮುಖ ಪಥವು ಭಾರತದ ರಕ್ಷಣಾ ಕೈಗಾರಿಕಾ ನೆಲೆಯನ್ನು ಬಲಪಡಿಸುತ್ತಿದೆ ಎಂಬುದರ ಸ್ಪಷ್ಟ ಸೂಚಕವಾಗಿದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT