ಶಶಿ ತರೂರ್ 
ದೇಶ

ನನ್ನ ಮಟ್ಟಿಗೆ ಈ ವಿಷಯ ತುಂಬಾ ಸರಳ; ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸಬೇಕು: ಶಶಿ ತರೂರ್

ಚುನಾವಣೆಗಳು ಇಡೀ ದೇಶಕ್ಕೆ ಮುಖ್ಯ. ನಕಲಿ ಮತದಾನ, ಬಹು ವಿಳಾಸ ಅಥವಾ ನಕಲಿ ಮತಗಳಿವೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕುವುದಕ್ಕಿಂತ ನಮ್ಮ ಪ್ರಜಾಪ್ರಭುತ್ವವು ತುಂಬಾ ಅಮೂಲ್ಯವಾಗಿದೆ.

ನವದೆಹಲಿ: ರಾಹುಲ್ ಗಾಂಧಿ ಮಾಡಿರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿನ ಅಕ್ರಮಗಳ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ರಾಹುಲ್ ಗಾಂಧಿ ಎತ್ತಿರುವ ಕೆಲವು ಗಂಭೀರ ಪ್ರಶ್ನೆಗಳಿಗೆ ಚುನಾವಣಾ ಆಯೋಗವು ಗಂಭೀರವಾದ ಉತ್ತರಗಳನ್ನು ನೀಡಬೇಕು ಎಂದಿದ್ದಾರೆ.

ಬಿಹಾರಗಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ 'ಮತ ಕಳ್ಳತನ' ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ನಾಯಕರು ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

'ನನ್ನ ಮಟ್ಟಿಗೆ ಈ ವಿಷಯ ತುಂಬಾ ಸರಳವಾಗಿದೆ. ರಾಹುಲ್ ಗಾಂಧಿ ಕೆಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ; ಅವುಗಳಿಗೆ ಗಂಭೀರ ಉತ್ತರಗಳು ಬೇಕಾಗಿವೆ. ಚುನಾವಣಾ ಆಯೋಗವು ರಾಷ್ಟ್ರದ ಬಗ್ಗೆ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ನಮ್ಮ ಚುನಾವಣೆಗಳ ಈ ಸಂಪೂರ್ಣ ವಿಶ್ವಾಸಾರ್ಹತೆಯ ಬಗ್ಗೆ ಸಾರ್ವಜನಿಕರ ಮನಸ್ಸಿನಲ್ಲಿ ಯಾವುದೇ ಸಂದೇಹಗಳು ಉಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಕೂಡ ಹೊಂದಿದೆ' ಎಂದು ಹೇಳಿದ್ದಾರೆ.

ಚುನಾವಣೆಗಳು ಇಡೀ ದೇಶಕ್ಕೆ ಮುಖ್ಯ. ನಕಲಿ ಮತದಾನ, ಬಹು ವಿಳಾಸ ಅಥವಾ ನಕಲಿ ಮತಗಳಿವೆಯೇ ಎಂಬ ಅನುಮಾನಗಳಿಂದ ಅಪಾಯಕ್ಕೆ ಸಿಲುಕುವುದಕ್ಕಿಂತ ನಮ್ಮ ಪ್ರಜಾಪ್ರಭುತ್ವವು ತುಂಬಾ ಅಮೂಲ್ಯವಾಗಿದೆ. ಜನರ ಮನಸ್ಸಿನಲ್ಲಿ ಸಂದೇಹಗಳಿದ್ದರೆ, ಅವುಗಳನ್ನು ಪರಿಹರಿಸಬೇಕು. ಈ ಪ್ರಶ್ನೆಗಳಿಗೆ ಉತ್ತರಗಳು ಲಭ್ಯವಿರಬಹುದು. ಆದರೆ, ಆ ಉತ್ತರಗಳನ್ನು ವಿಶ್ವಾಸಾರ್ಹವಾಗಿ ಒದಗಿಸಬೇಕು. ಚುನಾವಣಾ ಆಯೋಗವು ಪ್ರಶ್ನೆಗಳನ್ನು ತೆಗೆದುಕೊಂಡು ಅವುಗಳನ್ನು ಪರಿಹರಿಸಬೇಕು ಎಂಬುದು ನನ್ನ ಏಕೈಕ ವಿನಂತಿ...' ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT