ಮಾಜಿ CEC ರಾಜೀವ್ ಕುಮಾರ್ 
ದೇಶ

'ಮತಗಳ್ಳತನ' ಆರೋಪ ಬೆನ್ನಲ್ಲೇ ದೇಶ ತೊರೆದ್ರಾ ಮಾಜಿ CEC ರಾಜೀವ್ ಕುಮಾರ್?

ರಾಜೀವ್ ಕುಮಾರ್ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳನ್ನು ಅವರ ನಿಕಟವರ್ತಿಗಳು ತಳ್ಳಿ ಹಾಕಿದ್ದಾರೆ.

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು 'ಮತಗಳ್ಳತನ' ಆರೋಪ ದೇಶಾದ್ಯಂತ ಭಾರಿ ಚರ್ಚೆ, ವಿವಾದಕ್ಕೆ ಕಾರಣವಾಗಿರುವಂತೆಯೇ ಮಾಜಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ದೇಶ ತೊರೆದಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

2024ರ ಲೋಕಸಭಾ ಚುನಾವಣೆ ರಾಜೀವ್ ಕುಮಾರ್ ಅವರ ಮೇಲುಸ್ತುವಾರಿಯಲ್ಲಿ ನಡೆದಿತ್ತು. ಈ ವರ್ಷದ ಫೆಬ್ರವರಿಯಲ್ಲಿ ಅವರು ಕಚೇರಿಯನ್ನು ತೊರೆದಿದ್ದರು.

ರಾಜೀವ್ ಕುಮಾರ್ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳನ್ನು ಅವರ ನಿಕಟವರ್ತಿಗಳು ತಳ್ಳಿ ಹಾಕಿದ್ದಾರೆ. ಮಾಜಿ ಮುಖ್ಯ ಚುನಾವಣಾ ಆಯುಕ್ತರು ಭಾರತದಲ್ಲಿಯೇ ಇದ್ದಾರೆ. ಮಾಲ್ಟಾದಲ್ಲಿ ನೆಲೆಸಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ರಾಜೀವ್ ಕುಮಾರ್ ಚುನಾವಣಾ ಆಯೋಗದ ಮುಖ್ಯಸ್ಥರಾಗಿದ್ದಾಗ ಕರ್ನಾಟಕ, ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ನಡೆದ ಚುನಾವಣೆಯಲ್ಲಿ "ಮತ ಕಳ್ಳತನ'ವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT