ಕುಸ್ತಿಪಟು ಸುಶೀಲ್ ಕುಮಾರ್ 
ದೇಶ

ಛತ್ರಸಾಲ್ ಸ್ಟೇಡಿಯಂ ಕೊಲೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಕುಸ್ತಿಪಟು ಸಾಗರ್ ಧನಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್ ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ.ಒಂದು ವಾರದೊಳಗೆ ಶರಣಾಗುವಂತೆ ಕುಸ್ತಿಪಟುವಿಗೆ ನ್ಯಾಯಾಲಯ ಸೂಚಿಸಿದೆ.

ಸುಶೀಲ್ ಕುಮಾರ್ ಅವರಿಗೆ ಜಾಮೀನು ನೀಡಿ ದೆಹಲಿ ಹೈಕೋರ್ಟ್ ಮಾರ್ಚ್ 4 ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಾಧೀಶರಾದ ಸಂಜಯ್ ಕರೋಳ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿದೆ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ 2021 ರ ಮೇ ತಿಂಗಳಲ್ಲಿ ಕುಮಾರ್ ಮತ್ತು ಇತರರು ಧನಕರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಹಲ್ಲೆಯಲ್ಲಿ ಧನಕರ್ ಅವರ ಇಬ್ಬರು ಸ್ನೇಹಿತರು ಕೂಡ ಗಾಯಗೊಂಡಿದ್ದರು. ಮಾರಕಾಸ್ತ್ರಗಳಿಂದ ಹೊಡೆದ್ದರಿಂದ ಧಂಕರ್ ಅವರ ಮೆದುಳಿನ ಹಾನಿಯಾಗಿದೆ ಎಂಬುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕೂಡಲೇ ಧರ್ಮೇಂದ್ರ ಪ್ರಧಾನ್`ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಎಚ್ಚರಿಕೆ

KPSC ಪರೀಕ್ಷೆ ಅಕ್ರಮ: 80 ಲಕ್ಷಕ್ಕೆ ಸರ್ಕಾರಿ ಉದ್ಯೋಗ ಫಿಕ್ಸ್; ಎಚ್ಚೆತ್ತ ಕರ್ನಾಟಕ ಗೃಹ ಇಲಾಖೆ!

'ನೀಟ್‌ ಪರೀಕ್ಷಾ ವ್ಯವಸ್ಥೆ ಕುರಿತು ವಿದ್ಯಾರ್ಥಿಗಳ ಆತಂಕ ನಿಜವಾದದ್ದು; ಲಾಠಿ ಚಾರ್ಜ್‌ ನೋವು ತಂದಿದೆ' : Murli Manohar Joshi

ವೈಭವ್ ಸೂರ್ಯವಂಶಿ ವಿಶ್ವದಾಖಲೆ: ಸತತ 3 ಸರಣಿ ಸೋಲಿನ ಬಳಿಕ ಜಿಂಬಾಬ್ವೆ ವಿರುದ್ಧದ ಟಿ20 ಪಂದ್ಯ ಗೆದ್ದ ಭಾರತ!

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!