ಮನೆ ಮಾಲೀಕ ಎದ್ದರೆ ಆತನನ್ನು ಹೊಡೆಯಲು ಕೈಯಲ್ಲಿ ಕಬ್ಬಿಣದ ರಾಡು ಹಿಡಿದಿರುವ ಕಳ್ಳ 
ದೇಶ

Indore: ಭಯಾನಕ ಮನೆಗಳ್ಳತನ; ಮಲಗಿರುವ ಮಾಲೀಕನ ಎದುರು ಕಬ್ಬಿಣದ ರಾಡು ಹಿಡಿದು ನಿಂತ ಕಳ್ಳ! ಮುಂದೇನಾಯ್ತು? Video ನೋಡಿ...

ಆಘಾತಕಾರಿ ಕಳ್ಳತನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಒಬ್ಬ ಕಳ್ಳನ ಕೈಯಲ್ಲಿ ರಾಡ್ ಹಿಡಿದು ಕಾವಲು ನಿಂತಿದ್ದು, ಮತ್ತೊಬ್ಬ ಅಲ್ಮೇರಾದಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾನೆ.

ಇಂದೋರ್: ಇಂದೋರ್‌ನ ವಿಜಯನಗರದಲ್ಲಿರುವ ನಿವೃತ್ತ ನ್ಯಾಯಮೂರ್ತಿ ರಮೇಶ್ ಗಾರ್ಗ್ ಅವರ ನಿವಾಸದಲ್ಲಿ ಭಯಾನಕ ರೀತಿಯ ಮನೆ ಕಳ್ಳತನ ನಡೆದಿದೆ.ಮೂವರು ಅಪರಿಚಿತ ಕಳ್ಳರು ಸುಮಾರು ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿದ್ದಾರೆ.

ಕೇವಲ ನಾಲ್ಕು ನಿಮಿಷ ಮತ್ತು ಹತ್ತು ಸೆಕೆಂಡ್‌ಗಳಲ್ಲಿಯೇ ಇಷ್ಟೇಲ್ಲಾ ದರೋಡೆ ಮಾಡಿದ್ದಾರೆ. ಮುಂಜಾನೆ 3-30ರ ವೇಳೆಯಲ್ಲಿ ಈ ದರೋಡೆ ನಡೆದಿದ್ದು, ಮುಖವಾಡ ಧರಿಸಿದ್ದ ಕಳ್ಳರು, ಮುಖ್ಯ ಗೇಟ್‌ನ ಬೀಗವನ್ನು ಮುರಿದು ಬಂಗಲೆ ನುಗಿದ್ದು, ಅಲ್ಮೇರಾ ತೆರೆದು ಬೆಲೆಬಾಳುವ ವಸ್ತುಗಳೊಂದಿಗೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆಘಾತಕಾರಿ ಕಳ್ಳತನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಒಬ್ಬ ಕಳ್ಳನ ಕೈಯಲ್ಲಿ ರಾಡ್ ಹಿಡಿದು ಕಾವಲು ನಿಂತಿದ್ದು, ಮತ್ತೊಬ್ಬ ಅಲ್ಮೇರಾದಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು ದೋಚಿದ್ದಾನೆ.

ಭಾನುವಾರ ಬೆಳಗ್ಗೆ ಮನೆಯವರು ಮಲಗಿದ್ದಾಗ ನಡೆದಿರುವ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯಾರಾದರೂ ಅಪರಿಚಿತರು ಬಂದರೆ ಎಚ್ಚರಿಕೆ ನೀಡುವ ವ್ಯವಸ್ಥೆ ಇದ್ದರೂ ನ್ಯಾಯಮೂರ್ತಿ ಗಾರ್ಗ್ ಅವರ ಮಗ ರಿತ್ವಿಕ್ ಗಾಡ ನಿದ್ರೆಗೆ ಜಾರಿದ್ದಾರೆ. ಇವರು ಎದ್ದರೆ ಅವರನ್ನು ಹೊಡೆಯಲು ಒಬ್ಬ ಕಳ್ಳ ಕೈಯಲ್ಲಿ ರಾಡ್ ಹಿಡಿದು ನಿಂತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಕಳ್ಳರು ಕಬ್ಬಿಣದ ಕಿಟಕಿಯ ಗ್ರಿಲ್ ಕತ್ತರಿಸಿ ಬಂಗಲೆಗೆ ನುಗ್ಗಿದ್ದಾರೆ. ಮತ್ತೊಂದು ಕೊಠಡಿಯಲ್ಲಿ ಮಲಗಿದ್ದ ರಿತ್ವಿಕ್‌ನ ಹೆಂಡತಿ ಮತ್ತು ಮಕ್ಕಳಿಗೆ ಕಳ್ಳತನದ ಬಗ್ಗೆ ಗೊತ್ತೇ ಆಗಿಲ್ಲ. ಇದು ಸ್ಥಳೀಯ ಜನರಲ್ಲಿ ಆತಂಕಕ್ಕೆ ಮೂಡಿಸಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT