ಮಲ್ಲಿಕಾರ್ಜುನ ಖರ್ಗೆ 
ದೇಶ

ಅಧಿಕಾರದಲ್ಲಿ ಉಳಿಯಲು ಬಿಜೆಪಿ ಯಾವುದೇ ಮಟ್ಟಕ್ಕಾದರೂ ಹೋಗುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತಿದ್ದಾರೆಂದು ಘೋಷಿಸಲಾಗುತ್ತಿದೆ ಎಂದು ಆರೋಪಿಸಿದರು.

ನವದೆಹಲಿ: ಆಡಳಿತಾರೂಢ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟಕ್ಕಾದರೂ ಇಳಿಯಲು ಸಿದ್ಧವಾಗಿದೆ ಮತ್ತು ದೇಶಾದ್ಯಂತ ಚುನಾವಣೆಗಳಲ್ಲಿ ಹಲವಾರು 'ಅಕ್ರಮಗಳು' ಹೊರಹೊಮ್ಮುತ್ತಿವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

ಇಂದಿರಾ ಭವನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತಿದ್ದಾರೆಂದು ಘೋಷಿಸಲಾಗುತ್ತಿದೆ ಎಂದು ಆರೋಪಿಸಿದರು.

'ಅತ್ಯಂತ ಆಶ್ಚರ್ಯಕರ' ವಿಷಯವೆಂದರೆ 65 ಲಕ್ಷ ಜನರ ಮತಗಳನ್ನು ಕಡಿತಗೊಳಿಸುವುದಕ್ಕೆ ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ. SIR ನಿಂದ ಯಾರು ಲಾಭ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ. ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ, ಬದಲಾಗಿ ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ನಡೆಯುತ್ತಿರುವ ಹೋರಾಟವಾಗಿದೆ ಎಂದು ಅವರು ಹೇಳಿದರು.

'ಈಗ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಮಟ್ಟದ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಗಳಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ' ಎಂದು ಅವರು ಆರೋಪಿಸಿದರು.

'ವಿಶೇಷ ತೀವ್ರ ಪರಿಷ್ಕರಣೆಯ ಹೆಸರಿನಲ್ಲಿ, ವಿರೋಧ ಪಕ್ಷಗಳ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತವರು ಎಂದು ಘೋಷಿಸಲಾಗಿದೆ. ಯಾರ ಮತಗಳನ್ನು ಮತ್ತು ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂಬುದನ್ನು ಹೇಳಲು ಚುನಾವಣಾ ಆಯೋಗ ಸಿದ್ಧವಾಗಿಲ್ಲ. ಹೀಗಾಗಿ, ಇದು ನಿಷ್ಪಕ್ಷಪಾತತೆಯಿಂದ ಕೂಡಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬಹುದು' ಎಂದು ಅವರು ಹೇಳಿದರು.

'ಇ.ಡಿ ಮತ್ತು ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಲು ದುರುಪಯೋಗಪಡಿಸಿಕೊಳ್ಳುತ್ತಿದೆ. ಸುಪ್ರೀಂ ಕೋರ್ಟ್ ಕೂಡ ಮಧ್ಯಪ್ರವೇಶಿಸಿ ಈ ಸಂಸ್ಥೆಗಳನ್ನು ಟೀಕಿಸಿದೆ' ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

'ಅಲಿಪ್ತ ನೀತಿ'ಯಿಂದಾಗಿ ಭಾರತ ಗಳಿಸಿದ್ದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಈ ದೇಶಕ್ಕಾಗಿ ಸ್ವಾತಂತ್ರ್ಯದ ವೀರರು ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

IPL 2026: ಸನ್ ರೈಸರ್ಸ್ ವಿರುದ್ಧ ಗೆದ್ದ ಬಳಿಕ 'ವಿಸಿಲ್ ಪೋಡು' ಮೂಲಕ CSK ಅಭಿಮಾನಿಗಳನ್ನು ಕೆಣಕಿದ ಇಶಾನ್ ಕಿಶನ್! Video

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

SCROLL FOR NEXT