ಕಿಶ್ತ್‌ವಾರ್ ನಲ್ಲಿ ಮೇಘಸ್ಫೋಟ 
ದೇಶ

ಜಮ್ಮು-ಕಾಶ್ಮೀರ: ಕಿಶ್ತ್‌ವಾರ್ ನಲ್ಲಿ ಮೇಘಸ್ಫೋಟ; ಸಾವಿನ ಸಂಖ್ಯೆ 60ಕ್ಕೆ ಏರಿಕೆ; 100 ಮಂದಿಗೆ ಗಾಯ; ರಕ್ಷಣಾ ಕಾರ್ಯಾಚರಣೆ ತೀವ್ರ

ಗಾಯಾಳುಗಳನ್ನು ವಿಶೇಷ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 35 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚೋಸಿಟಿ ಗ್ರಾಮದಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿ 60 ಜನರು ಸಾವನ್ನಪ್ಪಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವಶೇಷಗಳು ಮತ್ತು ಮಣ್ಣಿನಡಿಯಲ್ಲಿ ಸಿಲುಕಿರುವ ಡಜನ್ ಗಟ್ಟಲೆ ಜನರನ್ನು ರಕ್ಷಿಸಲು ಬೃಹತ್ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೇಘಸ್ಫೋಟದಲ್ಲಿ ಇದುವರೆಗೆ 60 ಜನರು ಸಾವನ್ನಪ್ಪಿದ್ದಾರೆ, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಹಾಗೂ ಇನ್ನೂ ಅನೇಕರು ಕಾಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಕಾಣೆಯಾದವರ ನಿಖರವಾದ ಸಂಖ್ಯೆ ನಮಗೆ ತಿಳಿದಿಲ್ಲ ಎಂದು ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ವಿಶೇಷ ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. 35 ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದರು. ಈಗ, 69 ಜನರು ಕಾಣೆಯಾಗಿದ್ದಾರೆ. ಅವರ ಕುಟುಂಬ ಸದಸ್ಯರು ತಮ್ಮನ್ನು ಸಂಪರ್ಕಿಸಿ ತಮ್ಮ ಕುಟುಂಬಸ್ಥರು ಕಾಣೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದರು.

SDRF, ಪೊಲೀಸ್, ನಾಗರಿಕ ಆಡಳಿತ ಸಿಬ್ಬಂದಿ ಮತ್ತು NDRF ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು. ಸ್ಥಳೀಯ ಸ್ವಯಂಸೇವಕರು ಮತ್ತು ನಿವಾಸಿಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ.

ಚೋಸಿಟಿ ಗ್ರಾಮದಿಂದ 9,500 ಅಡಿ ಎತ್ತರದ ದೇವಸ್ಥಾನಕ್ಕೆ ಹೋಗುವ ರಸ್ತೆಯಿಂದ ಯಾತ್ರಿಕರು 8.5 ಕಿ.ಮೀ ದೂರ ಪ್ರಯಾಣಿಸಬೇಕಾಗಿದೆ. ದೇವಾಲಯವು ಎರಡು ಹಳ್ಳಿಗಳ ಮುಂದೆ ಇದೆ ಮತ್ತು ಭಕ್ತರು ಚೋಸಿಟಿಯ ಮೂಲಕ ಹಾದು ಹೋಗಬೇಕಾಗುತ್ತದೆ. ಮೇಘಸ್ಫೋಟ ಅಪ್ಪಳಿಸಿದಾಗ ಹೆಚ್ಚಿನ ಸಂಖ್ಯೆಯ ಜನರು ಸ್ಥಳದಲ್ಲಿದ್ದರು, ಇದರಿಂದಾಗಿ ಹಠಾತ್ ಪ್ರವಾಹ ಮತ್ತು ಮಣ್ಣು ಕುಸಿತ ಸಂಭವಿಸಿದೆ ಎಂದು ಸ್ವಯಂಸೇವಕರೊಬ್ಬರು ಹೇಳಿದರು.

"ಆ ಪ್ರದೇಶದಲ್ಲಿ ಪಾರ್ಕಿಂಗ್ ಸ್ಥಳ ಮತ್ತು ಲಂಗರ್ (ಸಮುದಾಯ ಅಡುಗೆಮನೆ) ಇತ್ತು. ಇದಲ್ಲದೆ, ಆ ಪ್ರದೇಶದಲ್ಲಿ ಅರೆಸೈನಿಕ ಶಿಬಿರವೂ ಇತ್ತು. ಯಾತ್ರೆಯ ದೃಷ್ಟಿಯಿಂದ ಸ್ಥಳೀಯರು ಅಂಗಡಿಗಳನ್ನು ಸಹ ಸ್ಥಾಪಿಸಿದ್ದರು" ಎಂದು ಡಿಡಿಸಿ ಅಧ್ಯಕ್ಷೆ ಕಿಶ್ತ್ವಾರ್ ಪೂಜಾ ಠಾಕೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT