ಪ್ರಧಾನಿ ಮೋದಿ 
ದೇಶ

ಈ ದೀಪಾವಳಿಗೆ ಡಬಲ್ ಧಮಾಕ: ಹಬ್ಬಕ್ಕೆ ಜನರಿಗೆ ಪ್ರಧಾನಿ ಮೋದಿ ಗಿಫ್ಟ್..! ಏನದು..?

ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್‌ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ.

ನವದೆಹಲಿ: ಈ ಬಾರಿ ದೀಪಾವಳಇ ಹಬ್ಬಕ್ಕೆ ಭರ್ಜರಿ ಉಡುಗೊರೆಯೊಂದನ್ನು ನೀಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದಾರೆ.

ಈ ಬಾರಿ ಡಬಲ್‌ ದೀಪಾವಳಿ ಎಂದಿರುವ ಮೋದಿ ಮೋದಿಯವರು, ಜಿಎಸ್‌ಟಿಯಲ್ಲಿ ಮಹತ್ವದ ಸುಧಾರಣೆ ತಂದು ತೆರಿಗೆ ಹೊರೆ ಕಡಿಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

79ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನವದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ, ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್‌ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್‌ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.

ತೆರಿಗೆ ಸ್ಲ್ಯಾಬ್‌ಗಳನ್ನು ತರ್ಕಬದ್ಧಗೊಳಿಸುವುದು, ಅಗತ್ಯ ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಜಿಎಸ್‌ಟಿ ದರಗಳನ್ನು ಕಡಿಮೆ ಮಾಡುವುದರ ಮೇಲೆ ಗಮನ ನೀಡಲಾಗುತ್ತಿದೆ. ಈ ಬಗ್ಗೆ ರಾಜ್ಯಗಳೊಂದಿಗೆ ಮಾತನಾಡಿದ್ದೇವೆ ನಮ್ಮ ಕೈಗಾರಿಕೆಗಳು ದೊಡ್ಡ ಲಾಭವನ್ನು ಪಡೆಯುತ್ತವೆ. ದೈನಂದಿನ ವಸ್ತುಗಳು ಅಗ್ಗವಾಗುತ್ತವೆ. ಇದು ಆರ್ಥಿಕತೆಗೆ ದೊಡ್ಡ ಉತ್ತೇಜನ ನೀಡುತ್ತದೆ. ಈ ಮೂಲಕ ಸಾಮಾನ್ಯ ಜನರಿಗೆ ಜೀವನವನ್ನು ಸುಲಭಗೊಳಿಸುವ ಮತ್ತು ನಮ್ಮ ಆರ್ಥಿಕತೆಯನ್ನು ಬಲಪಡಿಸುವುಕ್ಕೆ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.

ಜೊತೆಗೆ ಪ್ರಧಾನಿ ಮೋದಿಯವರು ಪ್ರಧಾನ ಮಂತ್ರಿ ವಿಕಸಿತ್‌ ಭಾರತ್ ರೋಜ್‌ಗಾರ್ ಯೋಜನೆಯನ್ನೂ ಘೋಷಿಸಿದರು. ಈ ಯೋಜನೆಯಡಿಯಲ್ಲಿ, ಖಾಸಗಿ ವಲಯದಲ್ಲಿ ಮೊದಲ ಉದ್ಯೋಗ ಪಡೆಯುವವರಿಗೆ ಸರ್ಕಾರದಿಂದ 15,000 ರೂ. ಸಿಗಲಿದೆ.

ಜಿಎಸ್‌ಟಿ ಮಂಡಳಿಯ ಮುಂದಿನ ಸಭೆಯು ಸೆಪ್ಟೆಂಬರ್ 9ರಂದು ನಡೆಯಲಿದೆ. ಪ್ರಸ್ತುತ, ನಮ್ಮ ದೇಶದಲ್ಲಿ ಶೇ.0.5, ಶೇ.12, ಶೇ.18 ಮತ್ತು ಶೇ.28 ಜಿಎಸ್‌ಟಿ ಸ್ಲ್ಯಾಬ್‌ಗಳಿವೆ. ದೇಶದ ಜನರ ಖರೀದಿ ಶಕ್ತಿಯನ್ನು ಹೆಚ್ಚಿಸುವ ಗುರಿಯೊಂದಿಗೆ, ಕೇಂದ್ರ ಸರ್ಕಾರವು ವಿವಿಧ ವರ್ಗಗಳ ಸರಕುಗಳು, ಉತ್ಪನ್ನಗಳು ಮತ್ತು ಸೇವೆಗಳ ಮೇಲಿನ ಜಿಎಸ್‌ಟಿಯನ್ನು ಕಡಿಮೆ ಮಾಡುವತ್ತ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Blast: ಅಲ್ ಫಲಾಹ್ ವಿವಿ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿ ಬಂಧನ!

Asia Cup Rising Stars T20: ಓಮನ್ ತಂಡವನ್ನು ಸೋಲಿಸಿ ಭಾರತ ಸೆಮಿಫೈನಲ್ ಪ್ರವೇಶ

ಶಬರಿಮಲೆಯಲ್ಲಿ ಜನದಟ್ಟಣೆ: ಎರಡು ದಿನದಲ್ಲಿ 2 ಲಕ್ಷ ಅಯ್ಯಪ್ಪ ಭಕ್ತರ ಭೇಟಿ; ಮಹಿಳಾ ಭಕ್ತೆ ಸಾವು!

ಬಾಬಾ ಸಿದ್ದಿಕಿ ಕೊಲೆ: ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಅಮೆರಿಕದಿಂದ ಗಡೀಪಾರು!

POCSO case: ಯಡಿಯೂರಪ್ಪಗೆ ಸಂಕಷ್ಟ; ಡಿಸೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್!

SCROLL FOR NEXT