ಪ್ರಧಾನಿ ನರೇಂದ್ರ ಮೋದಿ-ಡೊನಾಲ್ಡ್ ಟ್ರಂಪ್(ಸಂಗ್ರಹ ಚಿತ್ರ) 
ದೇಶ

ರೈತರ ಹಿತಾಸಕ್ತಿ ವಿಚಾರದಲ್ಲಿ ಗೋಡೆಯಂತೆ ನಿಲ್ಲುತ್ತೇವೆ, ಯಾವುದೇ ರಾಜಿ ಸಾಧ್ಯವಿಲ್ಲ: ಟ್ರಂಪ್‌ ಗೆ ಪ್ರಧಾನಿ ಮೋದಿ ತಿರುಗೇಟು

ನಾವು ಇನ್ನೊಂದು ದೇಶದ ಮೇಲೆ ಅವಲಂಬಿತರಾಗುವುದೇ ದೊಡ್ಡ ದುರಂತ. ಅದಕ್ಕಾಗಿಯೇ ಕೇಂದ್ರ ಸರ್ಕಾರ “ಆತ್ಮನಿರ್ಭರ್‌ ಭಾರತ್” ಗೆ ಹೆಚ್ಚು ಆದ್ಯತೆ ನೀಡಿದ್ದು, ನಾವು ಸ್ವಾವಲಂಬಿಯಾಗಲು ಇದು ಅತ್ಯಗತ್ಯ ಎಂದು ಹೇಳಿದರು.

ನವದೆಹಲಿ: ರೈತರು, ಕುರಿಗಾಹಿಗಳು, ಮೀನುಗಾರರ ಹಿತಾಸಕ್ತಿಗಳ ವಿಚಾರದಲ್ಲಿ ಗೋಡೆಯಂತೆ ನಿಲ್ಲುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ಮೋದಿಯವರು ತಿರುಗೇಟು ನೀಡಿದ್ದಾರೆ.

79 ನೇ ಸ್ವಾತಂತ್ರ್ಯ ದಿನ ಹಿನ್ನೆಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ರೈತರು, ಮೀನುಗಾರರು ಮತ್ತು ಜಾನುವಾರು ಸಾಕಣೆದಾರರಿಗೆ ಸಂಬಂಧಿಸಿದ ಯಾವುದೇ ಹಾನಿಕಾರಕ ನೀತಿಯ ವಿರುದ್ಧ ಮೋದಿ ಗೋಡೆಯಂತೆ ನಿಲ್ಲಲಿದ್ದಾರೆ. ರೈತರು, ಜಾನುವಾರು ಸಾಕಣೆದಾರರು, ಮೀನುಗಾರರ ಬಗ್ಗೆ ಯಾವುದೇ ರಾಜಿಯನ್ನು ಭಾರತ ಎಂದಿಗೂ ಒಪ್ಪುವುದಿಲ್ಲ ಎಂದು ಹೇಳಿದರು.

ಸ್ವಾತಂತ್ರ್ಯದ ನಂತರ ದೇಶದ ಪ್ರತಿಯೊಬ್ಬರಿಗೂ ಆಹಾರ ನೀಡುವುದು ದೊಡ್ಡ ಸವಾಲಿನ ಕೆಲಸವಾಗಿತ್ತು. ಆದರೆ, ನಮ್ಮ ರೈತರು ನಮ್ಮನ್ನು ಸ್ವಾವಲಂಬಿಯನ್ನಾಗಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿಯ ನಿರ್ಧಾರ ಗೋಡೆಯಂತೆ ಅಚಲವಾಗಿದ್ದು, ರೈತರ ಹಿತಾಸಕ್ತಿ ವಿಚಾರದಲ್ಲಿ ಯಾವುದೇ ರಾಜಿಗೆ ಸಿದ್ದವಿಲ್ಲ ಎಂದು ಟ್ರಂಪ್ ಅವರಿಗೆ ಸಂದೇಶ ರವಾನಿಸಿದ್ದಾರೆ.

ನಾವು ಇನ್ನೊಂದು ದೇಶದ ಮೇಲೆ ಅವಲಂಬಿತರಾಗುವುದೇ ದೊಡ್ಡ ದುರಂತ. ಅದಕ್ಕಾಗಿಯೇ ಕೇಂದ್ರ ಸರ್ಕಾರ “ಆತ್ಮನಿರ್ಭರ್‌ ಭಾರತ್” ಗೆ ಹೆಚ್ಚು ಆದ್ಯತೆ ನೀಡಿದ್ದು, ನಾವು ಸ್ವಾವಲಂಬಿಯಾಗಲು ಇದು ಅತ್ಯಗತ್ಯ ಎಂದು ಹೇಳಿದರು.

ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತದ ಸಾಮರ್ಥ್ಯವನ್ನು ಸಾಬೀತುಪಡಿಸಲು ನಮ್ಮದೇ ಆದ ರಸಗೊಬ್ಬರಗಳು ಮತ್ತು ಯುದ್ಧ ವಿಮಾನಗಳಿಗೆ ಸ್ಥಳೀಯ ಎಂಜಿನ್‌ಗಳನ್ನು ಅಭಿವೃದ್ಧಿಪಡಿಸಲು ಸ್ಪಷ್ಟ ಕರೆ ನೀಡಿದರು.

ನಮ್ಮ ಇಂಧನ ಅಗತ್ಯಗಳನ್ನು ಪೂರೈಸಲು ನಾವು ಅನೇಕ ದೇಶಗಳ ಮೇಲೆ ಅವಲಂಬಿತರಾಗಿದ್ದೇವೆ ಎಂದು ನಮಗೆ ತಿಳಿದಿದೆ. ಆದರೆ, ನಿಜವಾದ ಸ್ವಾವಲಂಬಿ ಭಾರತವನ್ನು ನಿರ್ಮಿಸಲು, ನಾವು ಇಂಧನ ಸ್ವಾತಂತ್ರ್ಯವನ್ನು ಸಾಧಿಸಬೇಕು ಎಂದರು.

ಕಳೆದ 11 ವರ್ಷಗಳಲ್ಲಿ, ನಮ್ಮ ಸೌರಶಕ್ತಿ ಸಾಮರ್ಥ್ಯವು 30 ಪಟ್ಟು ಹೆಚ್ಚಾಗಿದೆ. ಹತ್ತು ಹೊಸ ಪರಮಾಣು ರಿಯಾಕ್ಟರ್‌ಗಳು ಪ್ರಸ್ತುತ ಕಾರ್ಯನಿರ್ವಹಿಸುತ್ತಿವೆ. ಭಾರತವು 100ನೇ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ ನಮ್ಮ ಪರಮಾಣು ಶಕ್ತಿ ಸಾಮರ್ಥ್ಯವನ್ನು ಹತ್ತು ಪಟ್ಟು ಹೆಚ್ಚಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

ಬಾಗಲಕೋಟೆ: ರೈತರ ಟ್ರ್ಯಾಕ್ಟರ್​ಗಳಿಗೆ ಬೆಂಕಿ ಹಚ್ಚುತ್ತಿರುವ Video ವೈರಲ್; ಮೂರು FIR ದಾಖಲು

ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆ

1st test: ಭಾರತದ ಸೋಲಿಗೆ ಆ 'ಇಬ್ಬರೇ ಕಾರಣ': ಉಪ ನಾಯಕ ರಿಷಬ್ ಪಂತ್ ಹೇಳಿಕೆ

ದೆಹಲಿ ಸ್ಫೋಟಕ್ಕೆ 'Mother of Satan' ಬಾಂಬ್ ಬಳಕೆ ಸಾಧ್ಯತೆ: ಇದು ಎಷ್ಟು 'ವಿನಾಶಕಾರಿ' ತನಿಖಾಧಿಕಾರಿಗಳು ಹೇಳಿದ್ದೇನು?

SCROLL FOR NEXT