ಸಚಿವ ಪೆರಿಯಸಾಮಿ ಮನೆ 
ದೇಶ

ತಮಿಳುನಾಡು ಸಚಿವ ಪೆರಿಯಸಾಮಿ, ಅವರ ಪುತ್ರ ಡಿಎಂಕೆ ಶಾಸಕ ಸೆಂಥಿಲ್ ಕುಮಾರ್ ಮನೆ ಸೇರಿ ಹಲವು ಕಡೆ ED ದಾಳಿ

ಮಧುರೈ ನಗರದ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ತಂಡ, ಇಂದು ದಿಂಡಿಗಲ್‌ನ ದುರೈರಾಜ್ ನಗರದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸಾಮಿ ಅವರ ಮನೆಯಲ್ಲಿ ತೀವ್ರ ಶೋಧ ನಡೆಸಿದೆ.

ದಿಂಡಿಗಲ್: ತಮಿಳುನಾಡು ಸಚಿವ ಐ ಪೆರಿಯಸಾಮಿ, ಅವರ ಪುತ್ರ ಡಿಎಂಕೆ ಶಾಸಕ ಐ ಪಿ ಸೆಂಥಿಲ್ ಕುಮಾರ್ ಮತ್ತು ಪುತ್ರಿ ಇಂದ್ರಾಣಿ ಅವರಿಗೆ ಸಂಬಂಧಿಸಿದ ದಿಂಡಿಗಲ್‌ನ ಮನೆ ಸೇರಿದಂತೆ ಹಲವು ಕಡೆ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಶನಿವಾರ ಬೆಳಗಿನ ಜಾವ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಮಧುರೈ ನಗರದ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ತಂಡ, ಇಂದು ದಿಂಡಿಗಲ್‌ನ ದುರೈರಾಜ್ ನಗರದಲ್ಲಿರುವ ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸಾಮಿ ಅವರ ಮನೆಯಲ್ಲಿ ತೀವ್ರ ಶೋಧ ನಡೆಸಿದೆ.

ಇದಲ್ಲದೆ, ಸಚಿವರ ಪುತ್ರ ಮತ್ತು ಪಳನಿ ಶಾಸಕ ಐ ಪಿ ಸೆಂಥಿಲ್ ಕುಮಾರ್ ಅವರ ಸೀಲಪಾಡಿಯಲ್ಲಿರುವ ಮನೆ ಮತ್ತು ದಿಂಡಿಗಲ್‌ನ ವಲ್ಲಾಲರ್ ನಗರದಲ್ಲಿರುವ ಸಚಿವರ ಪುತ್ರಿ ಇಂದ್ರಾಣಿ ಅವರ ಮನೆಯ ಮೇಲೆಯೂ ಎರಡು ತಂಡಗಳು ದಾಳಿ ನಡೆಸಿವೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಡಿ ಕ್ರಮದ ಬಗ್ಗೆ ಪೆರಿಯಸಾಮಿ ಅಥವಾ ಡಿಎಂಕೆಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಮದ್ರಾಸ್ ಹೈಕೋರ್ಟ್ ಏಪ್ರಿಲ್ 29, 2025 ರಂದು ಗ್ರಾಮೀಣಾಭಿವೃದ್ಧಿ ಸಚಿವ ಐ ಪೆರಿಯಸಾಮಿ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ(ಡಿಎ) ಪ್ರಕರಣವನ್ನು ಪರಿಶೀಲಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್; Microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

'DNA ಕಳ್ಳತನ' ಭೀತಿ.. ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ, ಕಾರಣ ಏನು? video

SCROLL FOR NEXT