ರಾಜಸ್ತಾನದಲ್ಲಿ ಹಿಟ್ ಅಂಡ್ ರನ್ 
ದೇಶ

ಕ್ಷುಲ್ಲಕ ಗಲಾಟೆ: ಸ್ಕಾರ್ಪಿಯೋ ಕಾರು ಹರಿದು ವ್ಯಕ್ತಿ ಸಾವು! ಭೀಕರ Video ಸಿಸಿಟಿವಿಯಲ್ಲಿ ಸೆರೆ!

ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ರಸ್ತೆ ಗಲಾಟೆಯಲ್ಲಿ BJP ಪಕ್ಷದ ಧ್ವಜವಿದ್ದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ವ್ಯಕ್ತಿ ಮೇಲೆ ಸ್ಕಾರ್ಪಿಯೋ ಚಾಲಕ ಕಾರು ಹತ್ತಿಸಿರುವ ಭೀಕರ ವಿಡಿಯೋ ವೈರಲ್ ಆಗುತ್ತಿದೆ.

ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ರಸ್ತೆ ಗಲಾಟೆಯಲ್ಲಿ BJP ಪಕ್ಷದ ಧ್ವಜವಿದ್ದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ನಿವಾಸಿ ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಆತ ದಿನಗೂಲಿ ಕಾರ್ಮಿಕನಾಗಿ ಜೈಪುರದಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.

ಶನಿವಾರ ಸಂಜೆ ಎಸ್‌ಯುವಿ (ಮಹೀಂದ್ರಾ ಸ್ಕಾರ್ಪಿಯೋ) ಮತ್ತು ಕಾರು (ಮಾರುತಿ ಸುಜುಕಿ ಬ್ರೆಝಾ) ನಡುವೆ ಡಿಕ್ಕಿ ಸಂಭವಿಸಿತ್ತು. ಬಳಿಕ ಎರಡೂ ಕಾರಿನ ಚಾಲಕರು ಪರಸ್ಪರ ವಾಕ್ಸಮರ ನಡೆಸಿದರು. ಬಳಿಕ ಅದು ಘರ್ಷಣೆಗೆ ಕಾರಣವಾಗಿದೆ ಎಂದು ಪಶ್ಚಿಮ ವಿಭಾಗದ ಹೆಚ್ಚುವರಿ ಡಿಸಿಪಿ ಅಲೋಕ್ ಸಿಂಘಾಲ್ ತಿಳಿಸಿದ್ದಾರೆ.

'ಸ್ಕಾರ್ಪಿಯೋ ಕಾರಿನಲ್ಲಿದ್ದ ನಾಲ್ಕರಿಂದ ಐದು ಯುವಕರು ಸಿಕಾರ್ ಹೆದ್ದಾರಿಯ ಕಡೆಗೆ ಹೋಗುತ್ತಿದ್ದಾಗ, ಅವರ ವಾಹನವು ರಸ್ತೆ ಸಂಖ್ಯೆ 5 ರ ಖತುಶ್ಯಾಮ್ಜಿ ದೇವಸ್ಥಾನದ ಬಳಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ನಂತರ, ಯುವಕರು ಸ್ಕಾರ್ಪಿಯೋದಿಂದ ಇಳಿದು, ಕೋಲುಗಳನ್ನು ಹೊರತೆಗೆದು, ಇನ್ನೊಂದು ಕಾರಿನ ಗಾಜುಗಳನ್ನು ಒಡೆದು, ಚಾಲಕನೊಂದಿಗೆ ಜಗಳವಾಡಿದರು.

ನೋಡ ನೋಡುತ್ತಲೇ ಯುವಕರ ದಾಳಿ ಉಲ್ಬಣಗೊಂಡಿತು, ನಂತರ ಸ್ಥಳೀಯರು ಒಟ್ಟುಗೂಡಿ ಅವರನ್ನು ಎದುರಿಸಿದರು ಎಂದು ಹೇಳಿದ್ದಾರೆ.

ಅಂತೆಯೇ "ಎಸ್‌ಯುವಿಯಲ್ಲಿದ್ದ ಗುಂಪು ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಜನರು ಅವರ ವಾಹನದ ಮುಂದೆ ನಿಂತು ಅವರ ದಾರಿಯನ್ನು ತಡೆಯಲು ಪ್ರಯತ್ನಿಸಿದರು.

ಅವ್ಯವಸ್ಥೆಯ ನಡುವೆ, ಜನಸಂದಣಿಯಲ್ಲಿದ್ದ ಕಾರ್ಮಿಕ ಚಂದ್ರಶೇಖರ್ ರಸ್ತೆಗೆ ಬಿದ್ದರು. ನಂತರ, ಸ್ಕಾರ್ಪಿಯೋದಲ್ಲಿದ್ದ ಯುವಕರು ವಾಹನವನ್ನು ವೇಗವಾಗಿ ಚಲಾಯಿಸಿ ಅವರ ಮೇಲೆ ಹರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ಕಾರ್ಮಿಕ ಚಂದ್ರಶೇಖರ್ ನನ್ನು ಸಮೀಪದ ಕನ್ವಾಟಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT