ರಾಹುಲ್ ಗಾಂಧಿ ಮತ್ತು ಆಚಾರ್ಯ ಪ್ರಮೋದ್ ಕೃಷ್ಣಮ್ 
ದೇಶ

'Rahul Gandhi ವಿರೋಧ ಪಕ್ಷದ ನಾಯಕರಾಗಿರುವವರೆಗೆ, ಸಾಂವಿಧಾನಿಕ ಸಂಸ್ಥೆಗಳ ಗೌರವಿಸುವುದು ಕಷ್ಟ'

ಒಂದು ಪಿತೂರಿಯ ಭಾಗವಾಗಿ, ರಾಹುಲ್ ಗಾಂಧಿ ದೇಶವನ್ನು ದೂಷಿಸಲು ಬಯಸುತ್ತಾರೆ ಎಂದು ಆಚಾರ್ಯ ಪ್ರಮೋದ್ ಕೃಷ್ಣಮ್ ಹೇಳಿದ್ದಾರೆ.

ನಾಗ್ಪುರ: ಮತಕಳ್ಳತನ ಆರೋಪದ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಹೋರಾಟ ಮುಂದುವರೆದಿರುವಂತೆಯೇ ಇದಕ್ಕೆ ತಿರುಗೇಟು ನೀಡಿರುವ ಮಾಜಿ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಮ್ ರಾಹುಲ್ ಗಾಂಧಿ ವಿರುದ್ಧ ಕಿಡಿಕಾರಿದ್ದಾರೆ.

ನಾಗ್ಪುರದಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಮಾಜಿ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಮ್, 'ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿರುವವರೆಗೆ, ಸಾಂವಿಧಾನಿಕ ಸಂಸ್ಥೆಗಳು, ಸುಪ್ರೀಂ ಕೋರ್ಟ್ ಮತ್ತು ಸಂಸತ್ತನ್ನು ಅವರು ಗೌರವಿಸುವುದು ತುಂಬಾ ಕಷ್ಟ... ಒಂದು ಪಿತೂರಿಯ ಭಾಗವಾಗಿ, ರಾಹುಲ್ ಗಾಂಧಿ ದೇಶವನ್ನು ದೂಷಿಸಲು ಬಯಸುತ್ತಾರೆ ಎಂದು ಹೇಳಿದ್ದಾರೆ.

ಅಂತೆಯೇ ಹೊಸ ಸಂಸತ್ತು ನಿರ್ಮಾಣವಾದಾಗ, ರಾಹುಲ್ ಗಾಂಧಿ ಪ್ರತಿಭಟಿಸಿದರು; ರಾಮ ಮಂದಿರದ ಪವಿತ್ರೀಕರಣ ಸಮಾರಂಭದ ಆಹ್ವಾನವನ್ನೂ ನಿರಾಕರಿಸಿದರು... ಅವರು ಭಾರತದ ಸುಪ್ರೀಂ ಕೋರ್ಟ್‌ನತ್ತ ಬೆರಳು ತೋರಿಸುತ್ತಾರೆ. ಅವರು ಭಾರತದ ಸಂಸತ್ತನ್ನು ಗೌರವಿಸುವುದಿಲ್ಲ... ಈಗ ಅವರು ಚುನಾವಣಾ ಆಯೋಗವನ್ನು ಕಳ್ಳ ಎಂದು ಕರೆಯುತ್ತಿದ್ದಾರೆ.. ಎಂದು ಕಿಡಿಕಾರಿದರು.

ಮಹಾಭಿಯೋಗ ಗೊತ್ತುವಳಿಗೂ ಮುನ್ನ ರಾಜಿನಾಮೆ ನೀಡಿ

ಇದೇ ವೇಳೆ ಚುನಾವಣಾ ಆಯೋಗದ ಗೌರವಕ್ಕೆ ಚ್ಯುತಿ ತರುವ ರೀತಿಯಲ್ಲಿ ರಾಹುಲ್ ಗಾಂಧಿ ಆರೋಪಿಸುತ್ತಿದ್ದು, ರಾಹುಲ್ ಗಾಂಧಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಗೊತ್ತುವಳಿ ತರುವ ಮೊದಲು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು... ಎಲ್ಲಾ ವಿರೋಧ ಪಕ್ಷದ ನಾಯಕರು ಸಹ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು..." ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ: ಶೇ.50ರಷ್ಟು ಸಚಿವರಿಗೆ ಕೊಕ್..?

ಕಫ್ ಸಿರಪ್ ನ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯ ಪ್ರದೇಶ, ರಾಜಸ್ತಾನ, ತಮಿಳು ನಾಡು ಬ್ಯಾನ್

KRSಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಮತ್ತೆ ವಿವಾದದ ಕಿಡಿಹೊತ್ತಿಸಿದ ಮಾಜಿ ಸಚಿವ ರಾಜಣ್ಣ

2013-18ರ ಸಿದ್ದರಾಮಯ್ಯ ಬೇರೆ, ಈಗಿನ ಸಿದ್ದುನೇ ಬೇರೆ; ನಾಯಕನಾದವನಿಗೆ ಹೇಳಲಾಗದ ಒತ್ತಡ ಇರುತ್ತದೆ: ರಾಜಣ್ಣ ಹೊಸ ಬಾಂಬ್

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

SCROLL FOR NEXT