ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ 
ದೇಶ

ರಾಜಸ್ಥಾನ: ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಶವ ಪತ್ತೆ; ಹೆಂಡತಿ, ಮೂವರು ಮಕ್ಕಳು ನಾಪತ್ತೆ!

ಕೆಟ್ಟ ವಾಸನೆ ಬರುತ್ತಿರುವ ಕುರಿತು ಅಕ್ಕಪಕ್ಕದ ಮನೆಯವರು ದೂರು ನೀಡಿದ ನಂತರ, ಶವ ಪತ್ತೆಯಾಗಿದ್ದು, ಗಂಟಲಿನ ಭಾಗದಲ್ಲಿ ಹರಿತವಾದ ಆಯುಧದಿಂದ ಹೊಡೆದಿರುವ ಗಾಯ ಕಂಡುಬಂದಿದೆ.

ಜೈಪುರ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಅವರ ಪತ್ನಿ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಮೂಲದ ಹಂಸ್ರಾಮ್ ಅಲಿಯಾಸ್ ಸೂರಜ್ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ಕಿಶನ್‌ಗಢಬಾಸ್‌ನ ಆದರ್ಶ ಕಾಲೋನಿಯಲ್ಲಿ ವಾಸಿಸುತ್ತಿದ್ದರು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಸಿಂಗ್ ನಿರ್ವಾನ್ ಭಾನುವಾರ ತಿಳಿಸಿದ್ದಾರೆ.

ಕೆಟ್ಟ ವಾಸನೆ ಬರುತ್ತಿರುವ ಕುರಿತು ಅಕ್ಕಪಕ್ಕದ ಮನೆಯವರು ದೂರು ನೀಡಿದ ನಂತರ, ಶವ ಪತ್ತೆಯಾಗಿದ್ದು, ಗಂಟಲಿನ ಭಾಗದಲ್ಲಿ ಹರಿತವಾದ ಆಯುಧದಿಂದ ಹೊಡೆದಿರುವ ಗಾಯ ಕಂಡುಬಂದಿದೆ.

'ದೇಹದ ಕೊಳೆಯುವಿಕೆಯನ್ನು ವೇಗಗೊಳಿಸಲು ಅದರ ಮೇಲೆ ಉಪ್ಪು ಹಾಕಲಾಗಿತ್ತು' ಎಂದು ನಿರ್ವಾನ್ ಹೇಳಿದರು.

ಹಂಸ್ರಾಮ್ ಕಳೆದ ಒಂದೂವರೆ ತಿಂಗಳಿನಿಂದ ಟೆರೇಸ್ ಮೇಲಿನ ಕೊಠಡಿಯೊಂದರಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು ಮತ್ತು ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಸುನೀತಾ, ಮೂವರು ಮಕ್ಕಳು ಮತ್ತು ಮನೆ ಮಾಲೀಕರ ಮಗ ಜಿತೇಂದ್ರ ಶನಿವಾರದಿಂದ ಕಾಣೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿ ಮದ್ಯದ ಚಟ ಹೊಂದಿದ್ದನು ಮತ್ತು ಆಗಾಗ್ಗೆ ಜಿತೇಂದ್ರ ಜೊತೆ ಮದ್ಯಪಾನ ಮಾಡುತ್ತಿದ್ದನು. ಶನಿವಾರ ಸಂಜೆಯಿಂದ, ಜಿತೇಂದ್ರ ಮತ್ತು ಹಂಸ್ರಾಮ್ ಅವರ ಕುಟುಂಬ ಪತ್ತೆಯಾಗಿಲ್ಲ ಎಂದು ಡಿಎಸ್ಪಿ ಹೇಳಿದರು.

ಕಾಣೆಯಾದವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT