ಸಿ ಪಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದ ಪ್ರಧಾನಿ ಮೋದಿ  
ದೇಶ

Vice-President Polls: ಸರ್ವಾನುಮತದಿಂದ ರಾಧಾಕೃಷ್ಣನ್ ಆಯ್ಕೆ ಮಾಡಿ: ಪ್ರಧಾನಿ ಮೋದಿ ಮನವಿ; Video

ಪ್ರಧಾನಿ ಮೋದಿ ಅವರು ಇಂದಿನ ಸಭೆಯಲ್ಲಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದರು. ನಾಳೆ ರಾಧಾಕೃಷ್ಣನ್ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ನವದೆಹಲಿ: ಎನ್‌ಡಿಎಯ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲಾ ಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು. ಇಂದು ದೆಹಲಿಯಲ್ಲಿ ನಡೆದ ಆಡಳಿತ ಮೈತ್ರಿಕೂಟದ ಸಂಸದರ ಸಭೆಯಲ್ಲಿ ರಾಧಾಕೃಷ್ಣನ್ ಅವರ ಸಾರ್ವಜನಿಕ ಸೇವೆಯ ಜೀವನವನ್ನು ಶ್ಲಾಘಿಸಿದರು.

ಪ್ರಧಾನಿ ಮೋದಿ ಅವರು ಇಂದಿನ ಸಭೆಯಲ್ಲಿ ರಾಧಾಕೃಷ್ಣನ್ ಅವರನ್ನು ಸನ್ಮಾನಿಸಿದರು. ನಾಳೆ ರಾಧಾಕೃಷ್ಣನ್ ಅವರು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ವರದಿಗಾರರೊಂದಿಗೆ ಮಾತನಾಡುತ್ತಾ, ಮೋದಿ ತಮ್ಮ ಭಾಷಣದಲ್ಲಿ ವಿವಿಧ ಪಕ್ಷಗಳಿಗೆ, ವಿಶೇಷವಾಗಿ ವಿರೋಧ ಪಕ್ಷಗಳಿಗೆ, ರಾಧಾಕೃಷ್ಣನ್ ಅವರನ್ನು ಸರ್ವಾನುಮತದಿಂದ ಆಯ್ಕೆಯಾಗುವಂತೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ತಮಿಳುನಾಡಿನ ಅನುಭವಿ ಬಿಜೆಪಿ ನಾಯಕರಾಗಿರುವ ಮಹಾರಾಷ್ಟ್ರ ರಾಜ್ಯಪಾಲರನ್ನು ಮೋದಿ ಅವರು ಎನ್‌ಡಿಎ ಸಂಸದರಿಗೆ ಪರಿಚಯಿಸಿದರು, ಅವರ ದೀರ್ಘ ಸಾರ್ವಜನಿಕ ಜೀವನವನ್ನು ಅವರು ವಿವಿಧ ಹುದ್ದೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಇಂದು ತಮ್ಮ ಭಾಷಣದಲ್ಲಿ, ಮೋದಿ ಸಿಂಧೂ ಜಲ ಒಪ್ಪಂದದ ವಿಷಯವನ್ನು ಪ್ರಸ್ತಾಪಿಸಿದರು. ಸಂಸತ್ತು ಅಥವಾ ತಮ್ಮ ಸಚಿವ ಸಂಪುಟವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಕ್ಕಾಗಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಟೀಕಿಸಿದರು.

ಮೂಲಗಳ ಪ್ರಕಾರ, ನೆಹರೂ ದೇಶದ ಹಿತಾಸಕ್ತಿಯನ್ನು ಬಲಿಕೊಟ್ಟು ತಮ್ಮದೇ ಆದ ಪ್ರತಿಷ್ಠೆಯನ್ನು ಮೆರುಗುಗೊಳಿಸಲು ಪ್ರಯತ್ನಿಸಿದರು. ಪಾಕಿಸ್ತಾನಕ್ಕೆ ಶೇ. 80 ಕ್ಕಿಂತ ಹೆಚ್ಚು ನೀರನ್ನು ಬಳಸಲು ಅನುಮತಿ ನೀಡಲಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮೋದಿ ಸರ್ಕಾರ ಒಪ್ಪಂದವನ್ನು ಸ್ಥಗಿತಗೊಳಿಸಿದೆ.

ಸಿಂಧೂ ಜಲ ಒಪ್ಪಂದ

ಈ ಒಪ್ಪಂದವು ಪಾಕಿಸ್ತಾನದೊಂದಿಗಿನ ಇತರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ನೆಹರು ನಂತರ ಸಹೋದ್ಯೋಗಿಯೊಬ್ಬರಿಗೆ ಹೇಳಿದ್ದರು, ಆದರೆ ಅದು ಆಗಲಿಲ್ಲ ಎಂದರು.

ಭಾರತದ ದೀರ್ಘಕಾಲೀನ ಸಾರ್ವಭೌಮ ಕ್ರೆಡಿಟ್ ರೇಟಿಂಗ್ ನ್ನು ಮೇಲ್ದರ್ಜೆಗೇರಿಸುವ ಎಸ್ & ಪಿ ಗ್ಲೋಬಲ್ ರೇಟಿಂಗ್ಸ್ ಇತ್ತೀಚಿನ ನಿರ್ಧಾರದ ಬಗ್ಗೆಯೂ ಮೋದಿ ಮಾತನಾಡಿದರು, ಇದು ದೇಶದ ಉತ್ತಮ ಆರ್ಥಿಕತೆಯನ್ನು ಎತ್ತಿ ತೋರಿಸುತ್ತದೆ ಮತ್ತು ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸುತ್ತದೆ ಎಂದು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯ ಸಂಸದರನ್ನು ಒಳಗೊಂಡ ಎಲೆಕ್ಟೊರಲ್ ಕಾಲೇಜ್ ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತವನ್ನು ಹೊಂದಿರುವುದರಿಂದ, ವಿರೋಧ ಪಕ್ಷದ ಇಂಡಿಯಾ ಬಣವು ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸ್ಪರ್ಧೆಯನ್ನು ಒತ್ತಾಯಿಸುತ್ತದೆ ಎಂಬ ಸೂಚನೆಗಳ ನಡುವೆ ರಾಧಾಕೃಷ್ಣನ್ ಅವರ ಗೆಲುವು ಖಚಿತವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT