ತೇಜಸ್ವಿ ಯಾದವ್ - ರಾಹುಲ್ ಗಾಂಧಿ 
ದೇಶ

ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ: ತೇಜಸ್ವಿ ಯಾದವ್

ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ.

ನವಾಡ: 'ಹಳೆಯ ಮತ್ತು ಹಳಸಿದ' ಎನ್‌ಡಿಎ ಸರ್ಕಾರವನ್ನು ತೆಗೆದುಹಾಕಲು ಹಾಗೂ ಮುಂದಿನ ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಯುವಕರು ಸಂಕಲ್ಪ ಮಾಡಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮಂಗಳವಾರ ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ನ 'ಮತದಾರ ಅಧಿಕಾರ ಯಾತ್ರೆ'ಯ ಮೂರನೇ ದಿನವಾದ ಇಂದು ನವಾಡದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯಾದವ್, ಯುವ ಪೀಳಿಗೆಗೆ ರಾಜ್ಯವನ್ನು ಮುನ್ನಡೆಸಲು ಅವಕಾಶ ಸಿಗುವ ಸಮಯ ಬಂದಿದೆ ಎಂದರು.

"ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ. ಯುವಕರಿಗೆ ಈಗ ಅವಕಾಶ ಸಿಗಬೇಕು. ಬಿಹಾರದ ಬಗ್ಗೆ ನಮಗೆ ಒಂದು ದೃಷ್ಟಿಕೋನವಿದೆ ಎಂದು ಆರ್ ಜೆಡಿ ನಾಯಕ ಹೇಳಿದರು.

ಈ ಹಳೆಯ ಮತ್ತು ಹಳಸಿದ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕಲು ಮತ್ತು ಮುಂದಿನ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಯುವಕರು ಸಂಕಲ್ಪ ಮಾಡಿದ್ದಾರೆ" ಎಂದು ಅವರು ಹೇಳಿದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಒಂದು ಯೋಜನೆ ಎಂದು ಯಾದವ್ ಪುನರುಚ್ಚರಿಸಿದರು.

"SIR ಬಿಹಾರದಲ್ಲಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆಡಳಿತ ಪಕ್ಷದ ಪಿತೂರಿ ಎಂದು ಅವರು ಯಾದವ್ ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT