ತೇಜಸ್ವಿ ಯಾದವ್ - ರಾಹುಲ್ ಗಾಂಧಿ 
ದೇಶ

ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ: ತೇಜಸ್ವಿ ಯಾದವ್

ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ.

ನವಾಡ: 'ಹಳೆಯ ಮತ್ತು ಹಳಸಿದ' ಎನ್‌ಡಿಎ ಸರ್ಕಾರವನ್ನು ತೆಗೆದುಹಾಕಲು ಹಾಗೂ ಮುಂದಿನ ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಯುವಕರು ಸಂಕಲ್ಪ ಮಾಡಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಮಂಗಳವಾರ ಪ್ರತಿಪಾದಿಸಿದ್ದಾರೆ.

ಕಾಂಗ್ರೆಸ್‌ನ 'ಮತದಾರ ಅಧಿಕಾರ ಯಾತ್ರೆ'ಯ ಮೂರನೇ ದಿನವಾದ ಇಂದು ನವಾಡದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಯಾದವ್, ಯುವ ಪೀಳಿಗೆಗೆ ರಾಜ್ಯವನ್ನು ಮುನ್ನಡೆಸಲು ಅವಕಾಶ ಸಿಗುವ ಸಮಯ ಬಂದಿದೆ ಎಂದರು.

"ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ. ಯುವಕರಿಗೆ ಈಗ ಅವಕಾಶ ಸಿಗಬೇಕು. ಬಿಹಾರದ ಬಗ್ಗೆ ನಮಗೆ ಒಂದು ದೃಷ್ಟಿಕೋನವಿದೆ ಎಂದು ಆರ್ ಜೆಡಿ ನಾಯಕ ಹೇಳಿದರು.

ಈ ಹಳೆಯ ಮತ್ತು ಹಳಸಿದ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕಲು ಮತ್ತು ಮುಂದಿನ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಯುವಕರು ಸಂಕಲ್ಪ ಮಾಡಿದ್ದಾರೆ" ಎಂದು ಅವರು ಹೇಳಿದರು.

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಒಂದು ಯೋಜನೆ ಎಂದು ಯಾದವ್ ಪುನರುಚ್ಚರಿಸಿದರು.

"SIR ಬಿಹಾರದಲ್ಲಿ ಮತದಾರರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಆಡಳಿತ ಪಕ್ಷದ ಪಿತೂರಿ ಎಂದು ಅವರು ಯಾದವ್ ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿಯನ್ನು ಮುಚ್ಚಿಸಿದ್ದ ಇರಾನ್‌ನ IRGC ನೌಕಾಪಡೆ ಮುಖ್ಯಸ್ಥ ಅಲಿರೆಜಾನನ್ನು ಹೊಡೆದುರುಳಿಸಿದ ಇಸ್ರೇಲ್!

'ತನ್ನನ್ನು ಸರ್ವೋಚ್ಚ ನಾಯಕನನ್ನಾಗಿ ಮಾಡಲು ಇರಾನ್ ಬಯಸಿದೆ; ಆದರೆ ನಾನು ತಿರಸ್ಕರಿಸಿದೆ': ಡೊನಾಲ್ಡ್ ಟ್ರಂಪ್

ನಾವು VIPಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ: ತಮ್ಮ ಕುಟುಂಬಕ್ಕೆ IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರ ಆಗ್ರಹ!

ಪಶ್ಚಿಮ ಏಷ್ಯಾ ಸಂಘರ್ಷ: ಭಾರತ ಸೇರಿ 5 ದೇಶಗಳಿಗೆ Hormuz ಮೂಲಕ ಸುರಕ್ಷಿತ ಸಂಚಾರಕ್ಕೆ Iran ಅನುಮತಿ!

Hormuz ಅಷ್ಟೇ ಅಲ್ಲ.. ಬಾಲ ಬಿಚ್ಚಿದ್ರೆ Bab al mandeb ಜಲಸಂಧಿಯನ್ನೂ ಮುಚುತ್ತೇವೆ: ಹೌತಿಗಳು ಬರ್ತಾರೆ ಎಂದು Iran ಎಚ್ಚರಿಕೆ

SCROLL FOR NEXT