ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್‌: ಪ್ರಯೋಗಾಲಯದ ಉಪಕರಣದಿಂದ 10ನೇ ತರಗತಿ ವಿದ್ಯಾರ್ಥಿ ಕೊಂದ 8ನೇ ತರಗತಿ ಬಾಲಕ!

ತೀಕ್ಷ್ಣವಾದ ಪ್ರಯೋಗಾಲಯದ ಉಪಕರಣವನ್ನು ಹೊಂದಿದ್ದ ಆರೋಪಿ, 8ನೇ ತರಗತಿ ವಿದ್ಯಾರ್ಥಿ, ಶಾಲೆಯಿಂದ ಸ್ವಲ್ಪ ದೂರದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಹೊಟ್ಟೆಗೆ ಇರಿದಿದ್ದಾನೆ.

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್ ನಗರದ ಖೋಖ್ರಾದ ಸೆವೆಂತ್ ಡೇ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಗಳವಾರ ನಡೆದಿದೆ.

ಶಾಲೆ ಬಿಟ್ಟ ನಂತರ ಇಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತೀಕ್ಷ್ಣವಾದ ಪ್ರಯೋಗಾಲಯದ ಉಪಕರಣವನ್ನು ಹೊಂದಿದ್ದ ಆರೋಪಿ 8ನೇ ತರಗತಿ ವಿದ್ಯಾರ್ಥಿ, ಶಾಲೆಯಿಂದ ಸ್ವಲ್ಪ ದೂರದಲ್ಲಿ ಮನಿಯಾಶಾ ಸೊಸೈಟಿಯ ಗೇಟ್ ಬಳಿ 10ನೇ ತರಗತಿ ವಿದ್ಯಾರ್ಥಿ ಹೊಟ್ಟೆಗೆ ಇರಿದಿದ್ದಾನೆ.

ಘೋಡಾಸರ್ ನಿವಾಸಿಯಾದ ಮೃತ ಬಾಲಕ, ಕುಸಿದು ಬೀಳುವ ಮೊದಲು ಕಾಂಪೌಂಡ್‌ನ ಹಿಂಭಾಗಕ್ಕೆ ಓಡಿಹೋಗಿದ್ದು, ಆತನನ್ನು ಸಹ ವಿದ್ಯಾರ್ಥಿಗಳು ಸರ್ದಾರ್ ಪಟೇಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೂಲಗಳು ಒಂದು ಆತಂಕಕಾರಿ ಹಿನ್ನೆಲೆಯನ್ನು ಬಹಿರಂಗಪಡಿಸಿದ್ದು, ದಾಳಿಗೆ ಒಂದು ವಾರ ಮೊದಲು, ಹಲ್ಲೆಕೋರನು ಮೃತ ಬಾಲಕನ ಸೋದರಸಂಬಂಧಿ, ಅದೇ ಶಾಲೆಯ ವಿದ್ಯಾರ್ಥಿ ಜತೆ ಮೆಟ್ಟಿಲುಗಳ ಮೇಲೆ ಜಗಳವಾಡಿದ್ದನು. ಈ ಕೊಲೆಯು ಐದರಿಂದ ಏಳು ಇತರ ವಿದ್ಯಾರ್ಥಿಗಳ ಮುಂದೆ ಅತ್ಯಂತ ನಿಖರವಾಗಿ ನಡೆಸಲಾದ ಸೇಡಿನ ಪೂರ್ವಯೋಜಿತ ಕೃತ್ಯವಾಗಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.

ಮೃತ ಬಾಲಕನ ಕುಟುಂಬ, ಸುದ್ದಿ ತಿಳಿಯುತ್ತಿದ್ದಂತೆ ಶಾಲಾ ಆವರಣಕ್ಕೆ ನುಗ್ಗಿ, ಪಿಠೋಪಕರಣಗಳನ್ನು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸಿದರು ಮತ್ತು ಶಾಲಾ ಸಿಬ್ಬಂದಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು.

ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Women World Cup 2025: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ರನ್‌ಗಳ ವಿರೋಚಿತ ಸೋಲು; ಸೆಮಿಸ್‌ಗಾಗಿ ಕಿವೀಸ್ ಜೊತೆ ಸೆಣೆಸಾಟ!

ಮುಸ್ಲಿಂ ಯುವಕರನ್ನು ಮದುವೆಯಾದರೆ ಅಂತಹ ಮಗಳ ಕಾಲು ಮುರಿಯಿರಿ: ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್

ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಅವಹೇಳನ: ರಮೇಶ್ ಕತ್ತಿಗೆ ಸಂಕಷ್ಟ; ಅಟ್ರಾಸಿಟಿ ಪ್ರಕರಣ ದಾಖಲು!

Flood Relief: ಕರ್ನಾಟಕ, ಮಹಾರಾಷ್ಟ್ರಕ್ಕೆ 1,950 ಕೋಟಿ ರೂ ಬಿಡುಗಡೆಗೆ ಕೇಂದ್ರ ಸರ್ಕಾರ ಅನುಮೋದನೆ!

News headlines 19-10-2025 | ಖರ್ಗೆ ತವರಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ; ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಹೊಡೆದಾಟ; DK Shivakumar- Kiran Majumdar ನಡುವೆ ನಿಲ್ಲದ ವಾಕ್ಸಮರ

SCROLL FOR NEXT