ವಿಜಯ್ 
ದೇಶ

2026ರ ತಮಿಳುನಾಡು ಚುನಾವಣೆಯಲ್ಲಿ ರಾಜ್ಯಾದ್ಯಂತ ಏಕಾಂಗಿ ಹೋರಾಟ: ವಿಜಯ್ ಪ್ರತಿಜ್ಞೆ

ತಮ್ಮ ಭಾಷಣದ ಉದ್ದಕ್ಕೂ, ವಿಜಯ್ ತಮಿಳುನಾಡು ರಾಜಕೀಯದಲ್ಲಿ ತಮ್ಮನ್ನು ತಾವು ಏಕೈಕ ಶಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸಿದರು.

ಮಧುರೈ: "ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಪುನರುಚ್ಚರಿಸಿದ ನಟ-ರಾಜಕಾರಣಿ ವಿಜಯ್ ಅವರು, ತಮಿಳುನಾಡಿನಲ್ಲಿ 2026ರ ಚುನಾವಣೆಯಲ್ಲಿ ಡಿಎಂಕೆ ಮತ್ತು ತಮಿಳಗ ವೆಟ್ರಿ ಕಳಗಂ(ಟಿವಿಕೆ) ನಡುವೆ ನೇರ ಹೋರಾಟ ನಡೆಯಲಿದೆ ಎಂದು ಗುರುವಾರ ಒತ್ತಿ ಹೇಳಿದರು.

ಇಂದು ಮಧುರೈ ಜಿಲ್ಲೆಯ ಪರಪತಿಯಲ್ಲಿ ನಡೆದ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಟಿವಿಕೆ ಮುಖ್ಯಸ್ಥ, ತಮಿಳುನಾಡು ರಾಜಕೀಯದ ಮೂರು ಪ್ರಮುಖ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿಯನ್ನು ತಮ್ಮ ಪಕ್ಷದ ಸೈದ್ಧಾಂತಿಕ ಎದುರಾಳಿ ಎಂದು ಬಿಂಬಿಸಿದ ಟಿವಿಕೆ ನಾಯಕ, ಅದು ತಮಿಳುನಾಡಿನ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಮತ್ತು ಆರ್‌ಎಸ್‌ಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ತಮಿಳುನಾಡು ಮೀನುಗಾರರ ಬಂಧನ ಮತ್ತು ನೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿಜಯ್, ಕೇಂದ್ರ ಸರ್ಕಾರ ರಾಜ್ಯದ ಅಗತ್ಯಗಳ ಬಗ್ಗೆ ಅಸಡ್ಡೆ ಹೊಂದಿದೆ. ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಹೊಂದಿದೆ ಸಹ ಆರೋಪಿಸಿದರು.

ಇದೇ ವೇಳೆ ಆಡಳಿತರೂಢ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ ವಿಜಯ್, "ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಹಿಳೆಯರು, ರೈತರು ಮತ್ತು ಮೀನುಗಾರರಿಗೆ ದ್ರೋಹ ಮಾಡಿದ್ದಾರೆ" ಎಂದು ಆರೋಪಿಸಿದರು.

ತಮ್ಮ ಭಾಷಣದ ಉದ್ದಕ್ಕೂ, ವಿಜಯ್ ತಮಿಳುನಾಡು ರಾಜಕೀಯದಲ್ಲಿ ತಮ್ಮನ್ನು ತಾವು ಏಕೈಕ ಶಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸಿದರು. ತನ್ನನ್ನು ತಾನು ವ್ಯಾಪಕ ಘರ್ಜನೆ ಮಾಡುವ ಸಿಂಹಕ್ಕೆ ಹೋಲಿಸಿಕೊಂಡು, ಟಿವಿಕೆ ಜನರ ಧ್ವನಿಯಾಗಿದೆ ಎಂದು ಹೇಳಿದರು.

ಟಿವಿಕೆ ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ವಿಜಯ್ ಘೋಷಿಸಿದರು. ಇಡೀ ರಾಜ್ಯಾದ್ಯಂತ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೀಳಿಸುವ ಮೂಲಕ, ಟಿವಿಕೆಯ ಹೋರಾಟ ಕೆಲವು ಪ್ರದೇಶಗಳಿಗೆ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಮತ್ತು ಇದು ಪರಿವರ್ತನೆಯ ಗುರಿ ಹೊಂದಿದೆ ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

101 ಕ್ಷಿಪಣಿ ದಾಳಿ ಬೆನ್ನಲ್ಲೇ USS ಅಬ್ರಹಾಂ ಲಿಂಕನ್ ಪಲಾಯನ; ನಮ್ಮ ವ್ಯಾಪ್ತಿಯೊಳಗೆ ಬಂದರೆ, ನಾಶ ಮಾಡ್ತೀವೀ: ಇರಾನ್ ಎಚ್ಚರಿಕೆ!

ಅರ್ಜುನ್ ತೆಂಡೊಲ್ಕರ್ ಬಗ್ಗೆ ಹೇಳೋದಕ್ಕೆ ನೀನು ಯಾರು? ಆರ್. ಅಶ್ವಿನ್ ವಿರುದ್ಧ ಯುವರಾಜ್ ಸಿಂಗ್ ತಂದೆ ಆಕ್ರೋಶ, ಗಡ್ಡ ಕತ್ತರಿಸುವ ಸವಾಲು!

West Asia crisis ಕುರಿತು ಸರ್ವಪಕ್ಷ ಸಭೆ: 'ಪ್ರಧಾನಿ ಭಾಗವಹಿಸಬೇಕು'; ಪ್ರತಿಪಕ್ಷ, ಬಿಜೆಪಿ ನಡುವೆ ವಾಗ್ವಾದ

'ನನ್ನ ಸಹೋದರನಿಗೆ ಫೋನ್ ಮಾಡಿ, ಆದೇಶ ಪ್ರಶ್ನಿಸಲು ಎಷ್ಟು ಧೈರ್ಯ': ನ್ಯಾಯಾಂಗ ನಿಂದನೆ ವಾರ್ನಿಂಗ್ ನೀಡಿದ CJI; ಏನಿದು ಕೇಸ್?

ಚಿಕ್ಕಮಗಳೂರು 'Love Jihad' ಕೇಸ್: ಮತಾಂತರಕ್ಕೆ ಒತ್ತಾಯ; PU ಹಿಂದೂ ಬಾಲಕಿ ಜೊತೆ SSLC ವಿದ್ಯಾರ್ಥಿ ಲವ್; Pocso ದೂರು!

SCROLL FOR NEXT