ವಿಜಯ್ 
ದೇಶ

2026ರ ತಮಿಳುನಾಡು ಚುನಾವಣೆಯಲ್ಲಿ ರಾಜ್ಯಾದ್ಯಂತ ಏಕಾಂಗಿ ಹೋರಾಟ: ವಿಜಯ್ ಪ್ರತಿಜ್ಞೆ

ತಮ್ಮ ಭಾಷಣದ ಉದ್ದಕ್ಕೂ, ವಿಜಯ್ ತಮಿಳುನಾಡು ರಾಜಕೀಯದಲ್ಲಿ ತಮ್ಮನ್ನು ತಾವು ಏಕೈಕ ಶಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸಿದರು.

ಮಧುರೈ: "ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ" ಎಂದು ಪುನರುಚ್ಚರಿಸಿದ ನಟ-ರಾಜಕಾರಣಿ ವಿಜಯ್ ಅವರು, ತಮಿಳುನಾಡಿನಲ್ಲಿ 2026ರ ಚುನಾವಣೆಯಲ್ಲಿ ಡಿಎಂಕೆ ಮತ್ತು ತಮಿಳಗ ವೆಟ್ರಿ ಕಳಗಂ(ಟಿವಿಕೆ) ನಡುವೆ ನೇರ ಹೋರಾಟ ನಡೆಯಲಿದೆ ಎಂದು ಗುರುವಾರ ಒತ್ತಿ ಹೇಳಿದರು.

ಇಂದು ಮಧುರೈ ಜಿಲ್ಲೆಯ ಪರಪತಿಯಲ್ಲಿ ನಡೆದ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಟಿವಿಕೆ ಮುಖ್ಯಸ್ಥ, ತಮಿಳುನಾಡು ರಾಜಕೀಯದ ಮೂರು ಪ್ರಮುಖ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿಯನ್ನು ತಮ್ಮ ಪಕ್ಷದ ಸೈದ್ಧಾಂತಿಕ ಎದುರಾಳಿ ಎಂದು ಬಿಂಬಿಸಿದ ಟಿವಿಕೆ ನಾಯಕ, ಅದು ತಮಿಳುನಾಡಿನ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಮತ್ತು ಆರ್‌ಎಸ್‌ಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ತಮಿಳುನಾಡು ಮೀನುಗಾರರ ಬಂಧನ ಮತ್ತು ನೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿಜಯ್, ಕೇಂದ್ರ ಸರ್ಕಾರ ರಾಜ್ಯದ ಅಗತ್ಯಗಳ ಬಗ್ಗೆ ಅಸಡ್ಡೆ ಹೊಂದಿದೆ. ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಹೊಂದಿದೆ ಸಹ ಆರೋಪಿಸಿದರು.

ಇದೇ ವೇಳೆ ಆಡಳಿತರೂಢ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ ವಿಜಯ್, "ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಹಿಳೆಯರು, ರೈತರು ಮತ್ತು ಮೀನುಗಾರರಿಗೆ ದ್ರೋಹ ಮಾಡಿದ್ದಾರೆ" ಎಂದು ಆರೋಪಿಸಿದರು.

ತಮ್ಮ ಭಾಷಣದ ಉದ್ದಕ್ಕೂ, ವಿಜಯ್ ತಮಿಳುನಾಡು ರಾಜಕೀಯದಲ್ಲಿ ತಮ್ಮನ್ನು ತಾವು ಏಕೈಕ ಶಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸಿದರು. ತನ್ನನ್ನು ತಾನು ವ್ಯಾಪಕ ಘರ್ಜನೆ ಮಾಡುವ ಸಿಂಹಕ್ಕೆ ಹೋಲಿಸಿಕೊಂಡು, ಟಿವಿಕೆ ಜನರ ಧ್ವನಿಯಾಗಿದೆ ಎಂದು ಹೇಳಿದರು.

ಟಿವಿಕೆ ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ವಿಜಯ್ ಘೋಷಿಸಿದರು. ಇಡೀ ರಾಜ್ಯಾದ್ಯಂತ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೀಳಿಸುವ ಮೂಲಕ, ಟಿವಿಕೆಯ ಹೋರಾಟ ಕೆಲವು ಪ್ರದೇಶಗಳಿಗೆ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಮತ್ತು ಇದು ಪರಿವರ್ತನೆಯ ಗುರಿ ಹೊಂದಿದೆ ಎಂದು ಒತ್ತಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಬಿಜೆಪಿ, ಜೆಡಿಎಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

2026ರ ಐಪಿಎಲ್ ಗಾಗಿ RCB ಜೆರ್ಸಿ ಅನಾವರಣ; ಹೊಸ ಋತುವಿಗೆ ವಿಶಿಷ್ಟ ಲೋಗೋ, ಸ್ಟಾರ್ ಪ್ರತ್ಯಕ್ಷ!

Rottweiler ನಾಯಿ ದಾಳಿ: ಬರೊಬ್ಬರಿ 8 ಗಂಟೆ ಶಸ್ತ್ರಚಿಕಿತ್ಸೆ, 80 ಹೊಲಿಗೆ... ಕೊನೆಗೂ ಮಾಲೀಕ ಅರೆಸ್ಟ್! Video

ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದ ಶ್ಲಾಘಿಸಿದ ಪಿಯೂಷ್ ಗೋಯಲ್; ಭಾರತದ ಉಜ್ವಲ ಭವಿಷ್ಯಕ್ಕೆ ಇದು ಶುಭ ಸೂಚನೆ

Indian Stock Market: 2ನೇ ದಿನವೂ ಮಹಾ ಏರಿಕೆ; ಕೇವಲ 15 ನಿಮಿಷದಲ್ಲಿ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ರೂ ವೃದ್ಧಿ!

SCROLL FOR NEXT