ರಾಹುಲ್ ಗಾಂಧಿ 
ದೇಶ

ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಭದ್ರತೆ ಹೆಚ್ಚಿಸುವಂತೆ ಅಮಿತ್ ಶಾಗೆ ಪತ್ರ!

ಅಮಿತ್ ಶಾ ಗೆ ಪತ್ರ ಬರೆದಿರುವ ಅಜಯ್ ರೈ, ಸಾರ್ವಜನಿಕ ಪ್ರತಿನಿಧಿಗಳು ನಾಗರಿಕರಿಗೆ ಸಿಗುವಂತಿರಬೇಕು. ಆದರೆ ಅವರ ಸುರಕ್ಷತೆಯು ಅಷ್ಟೇ ಮುಖ್ಯವಾಗಿದೆ ಎಂದಿದ್ದಾರೆ.

ಲಖನೌ: ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲಿನ ದಾಳಿಯಾದ ಬೆನ್ನಲ್ಲೇ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಹೆಚ್ಚಿನ ಭದ್ರತಾ ವ್ಯವಸ್ಥೆ ಖಾತ್ರಿಪಡಿಸಬೇಕು ಎಂದು ಕಾಂಗ್ರೆಸ್‌ನ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಅಜಯ್ ರೈ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಅಮಿತ್ ಶಾ ಗೆ ಪತ್ರ ಬರೆದಿರುವ ಅಜಯ್ ರೈ, ಸಾರ್ವಜನಿಕ ಪ್ರತಿನಿಧಿಗಳು ನಾಗರಿಕರಿಗೆ ಸಿಗುವಂತಿರಬೇಕು. ಆದರೆ ಅವರ ಸುರಕ್ಷತೆಯು ಅಷ್ಟೇ ಮುಖ್ಯವಾಗಿದೆ ಎಂದಿದ್ದಾರೆ.

ನಮ್ಮ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವೈಯಕ್ತಿಕ ಭದ್ರತೆ ಅತ್ಯಂತ ಮಹತ್ವದ್ದಾಗಿದೆ. ಅವರು ಕಾಂಗ್ರೆಸ್ ಮತ್ತು ಭಾರತದ ರಾಜಕೀಯದಲ್ಲಿ ಅತ್ಯಂತ ಜನಪ್ರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಗಾಂಧಿಯವರು ಸಾರ್ವಜನಿಕರೊಂದಿಗೆ ನೇರ ಮಾತುಕತೆ ನಡೆಸುವ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಅದರಲ್ಲಿ ಭಾರತ್ ಜೋಡೋ ಯಾತ್ರೆಯೂ ಪ್ರಮುಖವಾಗಿದೆ. ಸದ್ಯ ಅವರು ಬಿಹಾರದಲ್ಲಿ 'ಜನ್ ಅಧಿಕಾರ' ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಲಕ್ಷಾಂತರ ಜನರು ಸೇರಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಹುಲ್ ಗಾಂಧಿ ಅವರಿಗೆ ಅತ್ಯುನ್ನತ ಮಟ್ಟದ ವೈಯಕ್ತಿಕ ಭದ್ರತೆಯನ್ನು ತಪ್ಪದೆ ಒದಗಿಸುವುದು ಸೂಕ್ತ ಎಂದು ಅಜಯ್ ರೈ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT